12:26 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಟ್ರಾಫಿಕ್ ಜಾಮ್ ತಡೆಗೆ ಬಸ್ ಚಲಿಸಲು ರಸ್ತೆಯಲ್ಲಿ ಯಲ್ಲೋ ಲೈನ್ ಅಳವಡಿಕೆ: ಡಿಸಿಪಿ ಸಲಹೆಗೆ ಮಂಗಳೂರು ಮೇಯರ್ ಅಸ್ತು

25/10/2023, 13:22

ಮಂಗಳೂರು(reporterkarnataka.com): ನಗರದಲ್ಲಿ ವಿಶೇಷವಾಗಿ ಸ್ಟೇಟ್ ಬ್ಯಾಂಕ್ ನಿಂದ ಹಂಪನಕಟ್ಟೆ ವರೆಗೆ ಟ್ರಾಫಿಕ್ ಜಾಮ್ ಆಗುವುದನ್ನು ತಡೆಯಲು ರಸ್ತೆಯಲ್ಲಿ ಬಸ್ ಚಲಿಸಲು ಯಲ್ಲೋ(ಹಳದಿ)ಲೈನ್ ಹಾಕಲು ಡಿಸಿಪಿ ದಿನೇಶ್ ಕುಮಾರ್ ಸಲಹೆ ಮಾಡಿದ್ದು, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಒಪ್ಪಿಗೆ ಸೂಚಿಸಿದ್ದಾರೆ.


ಚತುಷ್ಪಥದಲ್ಲಿ ಬಸ್ ಗಳು ರಸ್ತೆಯಲ್ಲಿ ನಿಲ್ಲಿಸುವುದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತದೆ. ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಸ್ ಗಳ
ಎಂಟ್ರಿ ಮತ್ತು ಎಕ್ಸಿಟ್ ನಲ್ಲಿ ಹಂಪ್ಸ್ ಆಳವಡಿಸಬೇಕು. ಬಸ್ ಗಳು ಅತೀ ವೇಗವಾಗಿ ಬಸ್ ಸ್ಟಾಂಡಿನೊಳಗೆ ಚಲಿಸುವುದನ್ನು ಇದರಿಂದ ತಡೆಯಲು ಸಾಧ್ಯ ಎಂದು ಡಿಸಿಪಿ ಅಭಿಪ್ರಾಯಪಟ್ಟರು.
ಸರ್ವಿಸ್ ಬಸ್ ನಿಲ್ದಾಣ ಬಳಿಯ ಅನಧಿಕೃತ ಆಟೋರಿಕ್ಷಾ ಪಾರ್ಕಿಂಗ್ ಅನ್ನು ಡಿಸಿಪಿ ಪರಿಶೀಲನೆಗೆ ಸೂಚಿಸಿದರು.

ಶಾಸಕ ಡಿ. ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಾಜಿ ಮೇಯರ್ ಗಳಾದ ದಿವಾಕರ ಪಾಂಡೇಶ್ವರ, ಪ್ರೇಮಾನಂದ ಶೆಟ್ಟಿ ಜತೆ ಸ್ಟೇಟ್ ಬ್ಯಾಂಕ್ ಬಳಿಯ ಸರ್ವಿಸ್ ಬಸ್ ನಿಲ್ದಾಣ ಸುತ್ತಮುತ್ತಲಿನ ಪ್ರದೇಶಕ್ಕೆ ಡಿಸಿಪಿ ಭೇಟಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು