2:56 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ನವರಾತ್ರಿ ದುರ್ಗಾಮಾತಾ ಪೂಜೆ: ಶಾಸಕ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಸಂಬಂಧ ಬೆಸೆಯುವ ಬನ್ನಿ ಹಬ್ಬ ಆಚರಣೆ

25/10/2023, 16:51

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ನವರಾತ್ರಿ ದಸರಾ ಹಬ್ಬದ ಅಂಗವಾಗಿ ಅಥಣಿ ಪಟ್ಟಣದ ಶ್ರೀ ಹನುಮಾನ ಮಂದಿರದ ಸಮೀಪದಲ್ಲಿ ಶ್ರೀ ದುರ್ಗಾಮಾತಾ ಪೂಜೆ ಸಮಾರಂಭ ನಡೆಯಿತು.

ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ
ಸವದಿ ಅವರು ಪಾಲ್ಗೊಂಡು ಪೂಜೆ, ಪ್ರಾರ್ಥನೆ ನೆರವೇರಿಸಿದರು.
ನಾಡಿನ ಸಮಸ್ತ ಜನತೆಗೆ ದಸರಾ ವಿಜಯದಶಮಿ ಹಬ್ಬದ ಶುಭಾಶಯ ಕೋರಿದರು. ಈ ಶುಭ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ, ದುರ್ಗಾಮಾತೆ ಸರ್ವರ ಬಾಳಲ್ಲಿ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಪುರಸಭೆ ಸದಸ್ಯರಾದ ರಾಜು ಬುಲಬುಲೆ, ಸಂತೋಷ ಸಾವಡಕರ, ಮುಖಂಡರಾದ ದಿಲೀಪ ಲೋನಾರಿ, ರಾಮನಗೌಡ ಪಾಟೀಲ, ನಿತೀನ ಗೋಂಗಡೆ, ವಿಜಯಸಿಂಗ್ ರಜಪೂತ* ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.
ನಾವು ನೀವು ಬಂಗಾರದ್ಹಾಂಗಿರೋಣ್ರೀ: ದಸರಾ, ವಿಜಯದಶಮಿ, ಸಂಬಂಧ ಬೆಸೆಯುವ ಬನ್ನಿ ಹಬ್ಬದ ನಿಮಿತ್ಯ ಶಾಸಕ ಲಕ್ಷ್ಮಣ
ಸವದಿ ಅವರನ್ನು ಅಥಣಿ
ಕ್ಷೇತ್ರದ ವಿವಿಧ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು, ಸಾರ್ವಜನಿಕರು ಭೇಟಿ ಮಾಡಿ ಪರಸ್ಪರ ಬನ್ನಿ ಕೊಟ್ಟು “ನಾವು ನೀವು ಬಂಗಾರದ್ಹಾಂಗಿರೋಣ್ರೀ”..ಎಂದು ಹಬ್ಬದ ಶುಭಾಶಯ ಕೋರಿದರು.

ಇತ್ತೀಚಿನ ಸುದ್ದಿ

ಜಾಹೀರಾತು