12:11 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ನವರಾತ್ರಿ ದುರ್ಗಾಮಾತಾ ಪೂಜೆ: ಶಾಸಕ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಸಂಬಂಧ ಬೆಸೆಯುವ ಬನ್ನಿ ಹಬ್ಬ ಆಚರಣೆ

25/10/2023, 16:51

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ನವರಾತ್ರಿ ದಸರಾ ಹಬ್ಬದ ಅಂಗವಾಗಿ ಅಥಣಿ ಪಟ್ಟಣದ ಶ್ರೀ ಹನುಮಾನ ಮಂದಿರದ ಸಮೀಪದಲ್ಲಿ ಶ್ರೀ ದುರ್ಗಾಮಾತಾ ಪೂಜೆ ಸಮಾರಂಭ ನಡೆಯಿತು.

ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ
ಸವದಿ ಅವರು ಪಾಲ್ಗೊಂಡು ಪೂಜೆ, ಪ್ರಾರ್ಥನೆ ನೆರವೇರಿಸಿದರು.
ನಾಡಿನ ಸಮಸ್ತ ಜನತೆಗೆ ದಸರಾ ವಿಜಯದಶಮಿ ಹಬ್ಬದ ಶುಭಾಶಯ ಕೋರಿದರು. ಈ ಶುಭ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ, ದುರ್ಗಾಮಾತೆ ಸರ್ವರ ಬಾಳಲ್ಲಿ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಪುರಸಭೆ ಸದಸ್ಯರಾದ ರಾಜು ಬುಲಬುಲೆ, ಸಂತೋಷ ಸಾವಡಕರ, ಮುಖಂಡರಾದ ದಿಲೀಪ ಲೋನಾರಿ, ರಾಮನಗೌಡ ಪಾಟೀಲ, ನಿತೀನ ಗೋಂಗಡೆ, ವಿಜಯಸಿಂಗ್ ರಜಪೂತ* ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.
ನಾವು ನೀವು ಬಂಗಾರದ್ಹಾಂಗಿರೋಣ್ರೀ: ದಸರಾ, ವಿಜಯದಶಮಿ, ಸಂಬಂಧ ಬೆಸೆಯುವ ಬನ್ನಿ ಹಬ್ಬದ ನಿಮಿತ್ಯ ಶಾಸಕ ಲಕ್ಷ್ಮಣ
ಸವದಿ ಅವರನ್ನು ಅಥಣಿ
ಕ್ಷೇತ್ರದ ವಿವಿಧ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು, ಸಾರ್ವಜನಿಕರು ಭೇಟಿ ಮಾಡಿ ಪರಸ್ಪರ ಬನ್ನಿ ಕೊಟ್ಟು “ನಾವು ನೀವು ಬಂಗಾರದ್ಹಾಂಗಿರೋಣ್ರೀ”..ಎಂದು ಹಬ್ಬದ ಶುಭಾಶಯ ಕೋರಿದರು.

ಇತ್ತೀಚಿನ ಸುದ್ದಿ

ಜಾಹೀರಾತು