ಇತ್ತೀಚಿನ ಸುದ್ದಿ
ಪ್ಯಾರಾ ಏಷ್ಯನ್ ಕ್ರೀಡಾಕೂಟ: ಚಿಕ್ಕಮಗಳೂರಿನ ಗುಡ್ನಳ್ಳಿಯ ಅಂಧ ಓಟಗಾರ್ತಿ ರಕ್ಷಿತಾ ರಾಜುಗೆ ಚಿನ್ನದ ಪದಕ
26/10/2023, 13:17
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಹಾಂಗ್ ಝ್ ನಲ್ಲಿ ನಡೆದ ಏಷ್ಯನ್ ಪ್ಯಾರಾಲಂಫಿಕ್ ಕ್ರೀಡಾಕೂಟದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬಾಳೂರಿನ ಗುಡ್ನಳ್ಳಿಯ ಅಂಧ ಓಟಗಾರ್ತಿ ರಕ್ಷಿತಾ ರಾಜು 1500 ಮೀ ಚಿನ್ನದ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.ಬುಧವಾರ ನಡೆದ 1500 ಮೀ ಭಾರತಕ್ಕೆ ಎರಡು ಚಿನ್ನದ ಪದಕಗಳು ಲಭಿಸಿದ್ದು ಅದರಲ್ಲಿ 1500 ಮೀ ಓಟವನ್ನು 5:21:45 ಸೆಕೆಂಡಿನಲ್ಲಿ ಕ್ರಮಿಸುವ ಮೂಲಕ ಚಿನ್ನದ ಗರಿಯನ್ನು ಮುಡಿಗೇರಿಸಿಕೊಂಡಿದ್ದಾರೆ.


ಕಳೆದ ಬಾರಿ ಪ್ಯಾರಿಸ್ ನಲ್ಲಿ ನಡೆದ ಟಿ11ನಲ್ಲಿ 5ನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದರು. ಬಾರಿ ರಕ್ಷಿತಾ ರಾಜು ಚಿನ್ನ ಗೆಲ್ಲುವ ಮೂಲಕ ಭರವಸೆಯ ಕ್ರೀಡಾಪಟುವಾಗಿ ಹೊರ ಹೊಮ್ಮಿದ್ದಾರೆ.ಅವರ ಕೋಚ್ ರಾಹುಲ್ ಬಾಲಕೃಷ್ಣ ಕೂಡ 1500 ಮೀನಲ್ಲಿ ಚಿನ್ನದ ಪದಕ ಪಡೆದಿರುವುದಾಗಿ ಹಾಂಗ್ ಝ್ ನಿಂದ ಕೋಚ್ ರಾಹುಲ್ ಬಾಲಕೃಷ್ಣ ತಿಳಿಸಿದ್ದಾರೆ.














