6:45 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯ ಮಟ್ಟದ ‘ಫಾ. ಮ್ಯಾಥ್ಯೂ ವಾಸ್ ಸ್ಮಾರಕ ಅಂತರ-ಪ್ಯಾರಿಶ್ ಟೂರ್ನಮೆಂಟ್ ಮತ್ತು ಕ್ರೀಡಾ ಪ್ರಶಸ್ತಿಗಳ ಸಂಭ್ರಮ

26/10/2023, 15:34

ಮಂಗಳೂರು(reporterkarnataka.com): ಫಾ. ಮ್ಯಾಥ್ಯೂ ವಾಸ್ ಸ್ಮಾರಕ ಅಂತರ-ಪಾರಿಶ್ ಫುಟ್‌ಬಾಲ್ ಮತ್ತು ಥ್ರೋ ಬಾಲ್ ಪಂದ್ಯಾವಳಿ ಹಾಗೂ ಫಾ. ಮ್ಯಾಥ್ಯೂ ವಾಸ್ ಎಕ್ಸಲೆನ್ಸ್ ಇನ್ ಸ್ಪೋರ್ಟ್ಸ್ ಅವಾರ್ಡ್ಸ್ ೨೦೨೩ ನಗರದ ಸಂತ ಅಲೋಶಿಯಸ್ ಪಿಯು ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಿತು.


ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯದ ೩೦ ಫುಟ್‌ಬಾಲ್ ಮತ್ತು ೧೭ ಥ್ರೋ ಬಾಲ್ ತಂಡಗಳು ಭಾಗವಹಿಸಿದ್ದವು. ಫಾದರ್ ಮ್ಯಾಥ್ಯೂ ವಾಸ್ ಎರಡನೇ ವರ್ಷದ ಪುಣ್ಯ ಸ್ಮರಣೆಯ ಪ್ರಯುಕ್ತ, ಕಮ್ಯೂನಿಟಿ ಎಂಪವರ್‌ಮೆಂಟ್ ಟ್ರಸ್ಟ್, ಮಂಗಳೂರು ಇವರು ಕ್ರಿಶ್ಚಿಯನ್ ಸ್ಪೋರ್ಟ್ಸ್ ಎಸೋಸಿಯೇಶನ್, ಕಥೋಲಿಕ್ ಸಭಾ ಮಂಗಳೂರು ಮತ್ತು ಉಡುಪಿ ಪ್ರದೇಶದ ಸಹಯೋಗದೊಂದಿಗೆ ಪಂದ್ಯಾವಳಿಯನ್ನು ಆಯೋಜಿಸಿತ್ತು.
ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಬಿಷಪ್ ಅತೀ ವಂದನೀಯ ಡಾ| ಅಲೋಶಿಯಸ್ ಪಾವ್ಲ್ ಡಿಸೋಜಾ ಉದ್ಘಾಟಕರಾಗಿ ಆಗಮಿಸಿದ್ದರು. ಮುಖ್ಯ ಅತಿಥಿಗಳಾಗಿ ರೋಹನ್ ಕಾರ್ಪೊರೇಶನ್ ಮಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕರಾದ ರೋಹನ್ ಮೊಂತೇರೊ ಉಪಸ್ಥಿತರಿದ್ದು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿಸೋಜ ಮತ್ತು ಮಿಲಾಗ್ರಿಸ್ ಪಿಯು ಕಾಲೇಜಿನ ಪ್ರಾಂಶುಪಾಲ ಹಾಗೂ ದಿವಂಗತ ಫಾದರ್ ಮ್ಯಾಥ್ಯೂ ವಾಸ್ ಅವರ ಸಹೋದರ ಮೆಲ್ವಿನ್ ವಾಸ್ ಗೌರವ ಅತಿಥಿಗಳಾಗಿ ಆಗಮಿಸಿದ್ದರು.
ಕಾರ್ಯಕ್ರಮದ ಸಂಚಾಲಕ ಹಾಗೂ ಕಮ್ಯೂನಿಟಿ ಎಂಪವರ್‌ಮೆಂಟ್ ಟ್ರಸ್ಟ್ ನ ಸಂಸ್ಥಾಪಕರಾದ ಅನಿಲ್ ಲೋಬೋ ಅವರು ಗಣ್ಯರಿಗೆ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.
ರಾಜ್ಯಮಟ್ಟ, ರಾಷ್ಟ್ರಮಟ್ಟ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆಗೈದ ಎರಡೂ ಧರ್ಮಪ್ರಾಂತ್ಯಗಳ ೧೫ ಉದಯೋನ್ಮುಖ ಕ್ರೀಡಾಪಟುಗಳನ್ನು ಶಾಲು ಹೊದಿಸಿ, ಪುಷ್ಪಗುಚ್ಛ, ಸ್ಮರಣಿಕೆ ಹಾಗೂ ೫೦೦೦ ರೂಪಾಯಿ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. ರೋಹನ್ ಮೊಂತೇರೊ ಸಂಘಟಕರ ಶ್ರಮವನ್ನು ಶ್ಲಾಘಿಸಿ ಸಾಧಕರನ್ನು ಅಭಿನಂದಿಸಿ, ಮುಂದೆ ಇಂತಹ ಕಾರ್ಯಕ್ರಮಗಳಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ನಿಶಾಂತ್ ಡಿ’ಸೋಜಾ (ಪಿಯುಸ್‌ನಗರ) – ಚೆಸ್, ಕ್ರಿಸ್ ಅಂಜೆನ್ ಬ್ಯಾಪ್ಟಿಸ್ಟ್ (ಉರ್ವಾ) – ಬ್ಯಾಡ್ಮಿಂಟನ್, ರಿಯಾನಾ ಧೃತಿ ಫೆರ್ನಾಂಡಿಸ್ (ಉರ್ವಾ) – ಈಜು, ವಿಯಾನ್ ಥಾಮಸ್ ಮಸ್ಕರೇನ್ಹಸ್ (ಉಡುಪಿ) – ಟೇಬಲ್ ಟೆನಿಸ್, ಡ್ಯಾಶಿಯಲ್ ಅಮಂಡಾ ಕೊನ್ಸೆಸೊ (ದೆೆರೆಬೈಲ್) – ರೋಲರ್ ಸ್ಕೇಟಿಂಗ್, ಜೆಸ್ನಿಯಾ ಕೊರೆಯಾ (ಬಿಜೈ) – ರೋಲರ್ ಸ್ಕೇಟಿಂಗ್, ರೀಮಾ ಡಿಸೋಜಾ (ಮೂಡುಬೆಳ್ಳೆ) – ಬಾಕ್ಸಿಂಗ್, ಜಾಯ್ಲಿನ್ ನತಾಲಿಯನ್ ಡಿಸೋಜಾ (ಕೆಮ್ಮಣ್ಣು) – ಬಾಕ್ಸಿಂಗ್, ತನಿಶಾ ಮಲಿನಾ ಕ್ರಾಸ್ಟೊ (ಮಿಲಾಗ್ರೆಸ್ ಕಲ್ಯಾಣಪುರ) -ವಾಲಿಬಾಲ್, ಫ್ಲಾವಿಶಾ ವೆಲಿಶಾ ಮೊಂತೇರೊ (ರಾಣಿಪುರ) – ಅಥ್ಲೆಟಿಕ್ಸ್, ಡೆಲಿಶಾ ಮಿರಾಂಡಾ (ಮೂಡುಬಿದಿರೆ) – ಫುಟ್ಬಾಲ್, ಶಾನ್ ಎಲ್ರಾಯ್ ಫೆರ್ನಾಂಡಿಸ್ (ಉಡುಪಿ) – ವಾಲಿಬಾಲ್, ವಿಪಿನ್ ಡಿಸೋಜಾ (ಸವೇರಾಪುರ) – ಹಾಕ್ಕಿ, ಆ್ಯಶ್ಲಿನ್ ಡಿಸೋಜಾ (ಉಡುಪಿ) – ಫುಟ್ಬಾಲ್, ಓಸ್ವಿನ್ ಜೋಶುವಾ ಡಿಮೆಲ್ಲೊ (ಪಿಯುಸ್‌ನಗರ) – ಚೆಸ್ ಇವರನ್ನು ಸನ್ಮಾನಿಸಲಾಯಿತು.
ಸಮಾರೋಪ ಸಮಾರಂಭಕ್ಕೆ ಸಂತ ಅಲೋಶಿಯಸ್ ಸಂಸ್ಥೆಯ ರೆಕ್ಟರ್ ವಂದನೀಯ ಮೆಲ್ವಿನ್ ಪಿಂಟೊ ಮುಖ್ಯ ಅತಿಥಿಗಳಾಗಿ ಹಾಗೂ ಸಂತೋಷ್ ಅರೇಂಜರ್ಸ್ ಮಾಲೀಕ ಸಂತೋಷ್ ಸಿಕ್ವೇರಾ ಮತ್ತು ರಾಷ್ಟ್ರಮಟ್ಟದ ಕ್ರೀಡಾ ಪಟು ನಿಶೆಲ್ ಡಿಸೋಜ ಗೌರವ ಅತಿಥಿಗಳಾಗಿ ಆಗಮಿಸಿದ್ದರು.
ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ನಿಶೆಲ್ ಅವರನ್ನು ಸನ್ಮಾನಿಸಲಾಯಿತು.
ಸುಳ್ಯ ಚರ್ಚ್ನ ಧರ್ಮಗುರು ವಂದನೀಯ ವಿಕ್ಟರ್ ಡಿಸೋಜ, ಸಿಇಟಿ ಅಧ್ಯಕ್ಷೆ ಸೆಲೆಸ್ಟಿನ್ ಡಿಸೋಜ, ಸಿಎಸ್‌ಎ ಅಧ್ಯಕ್ಷ ಜಾನ್ ಪಾಯ್ಸ್, ಸಿಎಸ್‌ಎಂಪಿ ಅಧ್ಯಕ್ಷ ಆಲ್ವಿನ್ ಡಿಸೋಜ, ಸಿಎಸ್‌ಯುಪಿ ಅಧ್ಯಕ್ಷ ಸಂತೋಶ್ ಕರ್ನೇಲಿಯೋ, ಲಾರೆನ್ಸ್ ಕ್ರಾಸ್ತಾ, ಅರುಣ್ ಬ್ಯಾಪ್ಟಿಸ್ಟ್, ಮುಂತಾದವರು ಉಪಸ್ಥಿತರಿದ್ದರು.
ಮೆಲ್ವಿನ್ ಪೆರಿಸ್ ಕಾರ್ಯಕ್ರಮವನ್ನು ಮತ್ತು ಪ್ಯಾಟ್ರಿಕ್ ರನ್ನಿಂಗ್ ಕಾಮೆಂಟರಿಯನ್ನು ನಡೆಸಿಕೊಟ್ಟರು.
ಫಲಿತಾಂಶ:
ಫುಟ್ಬಾಲ್
ವಿಜೇತರು – ಕುಲಶೇಖರ್ ಚರ್ಚ್
ರನ್ರ‍್ಸ್ ಅಪ್ – ಬಜ್ಜೋಡಿ ಚರ್ಚ್
ಸೆಮಿಫೈನಲಿಸ್ಟ್ – ಬೇಳ ಮತ್ತು ಕಾಸರಗೋಡು ಚರ್ಚ್
ಥ್ರೋ-ಬಾಲ್:
ವಿಜೇತರು- ಶಿರ್ತಾಡಿ ಚರ್ಚ್
ರನ್ರ‍್ಸ್ ಅಪ್: ಮಡಂತ್ಯಾರ್ ಚರ್ಚ್
ಸೆಮಿಫೈನಲಿಸ್ಟ್ಗಳು: ವಾಮಂಜೂರು ಮತ್ತು ಬೊಂದೇಲ್ ಚರ್ಚ್
ಪ್ರತಿ ವಿಜೇತ ತಂಡಕ್ಕೆ ಪ್ರಮಾಣಪತ್ರ, ಪದಕ, ಟ್ರೋಫಿ ಮತ್ತು ರೂ. ೨೫,೦೦೦/-
ಪ್ರತಿ ರನ್ನರ್ಸ್ ಅಪ್ ತಂಡಕ್ಕೆ ಪ್ರಮಾಣಪತ್ರ, ಪದಕ, ಟ್ರೋಫಿ ಮತ್ತು ರೂ. ೧೫೦೦೦/-
ಪ್ರತಿ ಸೆಮಿಫೈನಲ್ ತಂಡಕ್ಕೆ ಟ್ರೋಫಿ ಮತ್ತು ರೂ. ೭೫೦೦/- ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು