3:20 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಅ.27- 29: ಮುಕ್ಕ ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ‘ಕೋಡ್ ಮೀಟ್-2023’

26/10/2023, 16:35

ಮಂಗಳೂರು(reporterkarnataka.com): ಮುಕ್ಕ ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಅ.೨೭ ರಿಂದ ೨೯ ರವರೆಗೆ ‘ಕೋಡ್ ಮೀಟ್-೨೦೨೩’ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಶ್ರೀನಿವಾಸ ವಿಶ್ವವಿದ್ಯಾಲಯದ ರಿಜಿಸ್ಟಾರ್ ಡಾ. ಅನಿಲ್ ಕುಮಾರ್ ಹೇಳಿದರು.
ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅ.೨೭ ರಂದು ಬೆಳಿಗ್ಗೆ ೧೧ ಗಂಟೆಗೆ ಮುಕ್ಕ ಶ್ರೀನಿವಾಸ ವಿಶ್ವವಿದ್ಯಾಲಯದ ಓಪನ್ ಏರ್ ಅಡಿಟೋರಿಯಂನಲ್ಲಿ ಉದ್ಘಾಟಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀನಿವಾಸ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಮತ್ತು ಎ ಶಾಮರಾವ್ ಪ್ರತಿಷ್ಠಾನದ ಉಪಾಧ್ಯಕ್ಷ ಡಾ. ಎ. ಶ್ರೀನಿವಾಸ್ ರಾವ್, ಇನ್ಫೋಸಿಸ್ ವ್ಯವಸ್ಥಾಪಕ ರೋಹಿತ್ ಪೈ, ಶ್ರೀನಿವಾಸ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾದ ಎ. ವಿಜಯಲಕ್ಷ್ಮೀ ಆರ್. ರಾವ್, ಪ್ರೊ. ಎ. ಮಿತ್ರ ಎಸ್. ರಾವ್ ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ೩೫೦ಕ್ಕೂ ಹೆಚ್ಚಿನವರು ಭಾಗವಹಿಸಲಿದ್ದು, ಮೂರು ವಿಭಾಗಗಳಾಗಿ ವಿಂಗಡಿಸಿದ್ದು, ಪ್ರಥಮ, ದ್ವಿತೀಯ ಹಾಗೂ ಮೂರನೇ ಬಹುಮಾನವನ್ನು ವಿತರಿಸಲಾಗುವುದು. ಒಟ್ಟು ೧ ಲಕ್ಷ ರೂ.ದ ಬಹುಮಾನವನ್ನು ವಿತರಿಸಲು ತಿರ್ಮಾನಿಸಿದ್ದು, ೯ ಜನರಿಗೆ ಹಂಚಲಾಗುವುದು, ಇದರೊಂದಿಗೆ ಅವರಿಗೆ ಉಪಯುಕ್ತವಾಗುವಂತಹ ಆಕರ್ಶಕ ಕೂಪನ್‌ಗಳನ್ನು ಕೂಡ ನೀಡಲಾಗುವುದು ಎಂದು ಹೇಳಿದರು.



ಶ್ರೀನಿವಾಸ ವಿಶ್ವವಿದ್ಯಾಲಯದ ಎಸ್.ಯು.ಐ.ಇ.ಟಿ ಡೀನ್ ಡಾ. ಥಾಮಸ್ ಪಿಂಟೋ, ವಿಶ್ವವಿದ್ಯಾಲಯದ ವೆಬ್‌ಫ್ಲೋ ಕಮ್ಯೂನಿಟಿ ಮಾರ್ಗದರ್ಶಕಿ ಡಾ. ಸುಷ್ಮಾ ಅಕ್ಕರಾಜು, ಪ್ರೊಫೆಸರ್ ಡಾ. ರಂಜಿತ್ ಕೋಲ್ಕಡ, ವಿದ್ಯಾರ್ಥಿಗಳಾದ ಸಿದ್ದಾರ್ಥ್, ಅಬ್ರಾಬ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು