8:49 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಅರಣ್ಯಾಧಿಕಾರಿಯನ್ನೂ ಬಿಡದ ಹುಲಿ ಉಗುರು: ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕಳಸ ಡಿಆರ್ ಎಫ್ ಓ ದರ್ಶನ್ ಅಮಾನತು

27/10/2023, 15:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹುಲಿ ಉಗುರು ಧರಿಸಿದ ಆರೋಪದ ಮೇಲೆ ತನಿಖೆಗೆ ಹಾಜರಾಗದ ಹಿನ್ನೆಲೆ ಕಳಸದ ಉಪ ವಲಯ ಅರಣ್ಯಾಧಿಕಾರಿ ಡಿ. ಆರ್.ಎಫ್. ಓ. ದರ್ಶನ್ ಅವರನ್ನು ಅಮಾನತು ಮಾಡಲಾಗಿದೆ.

ಹುಲಿ ಉಗುರು ಧರಿಸಿದ್ದಾರೆ ಸೂಕ್ತ ಕ್ರಮ ಕೈಗೊಳ್ಳಿ ಎಂದು
ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರ ಮೇಲೂ ದೂರು ದಾಖಲಾಗಿತ್ತು. ವನ್ಯ ಜೀವಿ ಕಾಯ್ದೆಯಲ್ಲಿ ಪ್ರಕರಣ ದಾಖಲಿಸುವಂತೆ ದೂರು ನೀಡಲಾಗಿತ್ತು. ಕೊಪ್ಪ ಡಿ.ಎಫ್.ಓ. ನಂದೀಶ್ ಅಮಾನತು ಆದೇಶ ಹೊರಡಿಸಿದ್ದಾರೆ.
ಅರೆನೂರು ಗ್ರಾಮದ ಸುಪ್ರೀತ್ ಹಾಗೂ ಅಬ್ದುಲ್ ಎಂಬುವವರಿಂದ ದೂರು ದಾಖಲಾಗಿತ್ತು. ಆಲ್ದೂರು ವಲಯ ಅರಣ್ಯಾಧಿಕಾರಿಗೆ ಸುಪ್ರಿತ್ ಹಾಗೂ ಅಬ್ದುಲ್ ದೂರು ನೀಡಿದ್ದರು. ದರ್ಶನ್ ಅವರು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಮೂಲದ ಅಧಿಕಾರಿ. ತನಿಖೆ ನಡೆಸಿ ಕ್ರಮ ಕೈ ಗೊಳ್ಳುವಂತೆ ಲಿಖಿತ ದೂರು ನೀಡಿದ ಹಿನ್ನಲೆಯಲ್ಲಿ ಅದಿಕಾರಿ
ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು