10:01 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ಬಂಟ ಸಮುದಾಯ ಹೃದಯ ಶ್ರೀಮಂತಿಕೆಯ ಸಮಾಜ: ವಿಶ್ವ ಬಂಟರ ಸಮ್ಮೇಳನದಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

28/10/2023, 16:48

ಉಡುಪಿ(reporterkarnataka.com) : ಕಲೆ, ಕ್ರೀಡೆ, ಸಾಹಿತ್ಯ ಹೀಗೆ ಪ್ರತಿಯೊಂದು ಕ್ಷೇತ್ರಗಳಲ್ಲೂ ಬಂಟರ ಸಮುದಾಯದ ಕೊಡುಗೆ ಅಪಾರ. ಸ್ವಾತಂತ್ರ್ಯ ಹೋರಾಟದಲ್ಲೂ ಸಮುದಾಯದ ಹಲವು ಮಂದಿ ಪಾಲ್ಗೊಂಡಿದ್ದರು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು.


ನಗರದ ಅಜ್ಜರಕಾಡಿನ ಮಹಾತ್ಮ ಗಾಂಧಿ ಮೈದಾನದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ‘ವಿಶ್ವ ಬಂಟರ ಸಮ್ಮೇಳನ’ದಲ್ಲಿ ಅವರು ಮಾತನಾಡಿದ ಸಚಿವರು,ಕರ್ನಾಟಕಕ್ಕೆ, ಇಡೀ ಸಮಾಜಕ್ಕೆ ಬಂಟ ಸಮುದಾಯದ ಕೊಡುಗೆ ಅಪಾರ, ಎಲ್ಲೆ ಹೋದರೂ ತಮ್ಮತನವನ್ನು ಕಾಪಾಡಿಕೊಂಡು ಬರುತ್ತಿದ್ದಾರೆ ಎಂದರು.

ಹೊರ ರಾಜ್ಯ, ವಿದೇಶಗಳಲ್ಲಿ ಇರುವ ಬಂಟ ಸಮುದಾಯದವರನ್ನು ಒಗ್ಗೂಡಿಸುವ ಕೆಲಸವನ್ನು ಉಡುಪಿ-ಮಂಗಳೂರು ಬಂಟ ಸಮಾಜದವರು ಈ ಸಮ್ಮೇಳನದ ಮೂಲಕ ಮಾಡಿದ್ದಾರೆ ಎಂದು ಸಚಿವರಾದ ಹೆಬ್ಬಾಳ್ಕರ್ ಹೇಳಿದರು.
ನನ್ನ ತವರು ಬೆಳಗಾವಿಯಲ್ಲಿ ಬಂಟ ಸಮುದಾಯದವರ ಜೊತೆ ನಾನು ಉತ್ತಮ ಬಾಂಧವ್ಯ ಹೊಂದಿದ್ದೇನೆ. ಹೋಟೆಲ್ ಉದ್ಯಮಕ್ಕೆ ಬಂಟರ ಕೊಡುಗೆ ಅನನ್ಯ. ಬಂಟರ ಸಾಧನೆ ನೋಡಿದರೆ ಈ ಸಮುದಾಯದ ಮೇಲೆ ದೇವರ ಆಶೀರ್ವಾದವಿದೆ ಅಂತಾನೆ ಅರ್ಥ ಎಂದರು.
ಬಂಟ ಸಮುದಾಯ ಹೃದಯ ಶ್ರೀಮಂತಿಕೆಯ ಸಮಾಜ, ತಾವು ಬೇಳಿತಾರೆ, ಇತರ ಸಮಾಜದವರನ್ನು ಒಟ್ಟಿಗೆ ಕರೆದೊಯ್ಯುತ್ತಾರೆ. ವಿಶ್ವ ಬಂಟರ ಸಮ್ಮೇಳನ ಯಶಸ್ವಿಯಾಗಲಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹಾರಿಸಿದರು. ವಿಶ್ವ ಬಂಟರ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಈ ವೇಳೆ ಉಡುಪಿಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಶ್ರೀಪಾದರು, ವಿಧಾನಸಭೆಯ ಸಭಾಪತಿಗಳಾದ ಯು.ಟಿ.ಖಾದರ್, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಶಾಸಕರಾದ ಗಣೇಶ್ ಹುಕ್ಕೇರಿ, ಯಶ್ಪಾಲ್ ಸುವರ್ಣ, ಅಶೋಕ್ ಕುಮಾರ್ ರೈ, ಮಂಜುನಾಥ್ ಭಂಡಾರಿ, ಮಾಜಿ ಸಚಿವ ರಮಾನಾಥ ರೈ, ವಿಶೇಷ ಅತಿಥಿಗಳಾಗಿ ಕನ್ಯಾನ ಸದಾಶಿವ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಶಶಿರೇಖಾ ಆನಂದ ಶೆಟ್ಟಿ, ಎಂ.ಆರ್.ಜಿ ಗ್ರೂಪ್ ನ ಕೆ.ಪ್ರಕಾಶ್ ಶೆಟ್ಟಿ, ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ, ಅಭಯ
ಚಂದ್ರ ಜೈನ್, ಜಿ.ಎ.ಭಾವ ಸೇರಿದಂತೆ ಹಲವು ಮುಖಂಡರು ಸೇರಿದಂತೆ ಬಂಟರ ಸಮುದಾಯದ ಹಲವು ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು