6:43 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಬ್ಯಾಂಕ್ ಆಫ್ ಬರೋಡಾದಿಂದ ಬಾಬ್ ಲೈಟ್ ಉಳಿತಾಯ ಖಾತೆಯ ಪರಿಚಯ: ಜೀವಮಾನ ಶೂನ್ಯ ಬ್ಯಾಲೆನ್ಸ್ ಸೇವಿಂಗ್ ಅಕೌಂಟ್

28/10/2023, 17:56

ಮಂಗಳೂರು(reporterkarnataka.com): ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (ಬ್ಯಾಂಕ್) ತನ್ನ “ಬಾಬ್ ಕಿ ಸಂಗ್, ತ್ಯೋಹಾರ್ ಕಿ ಉಮಂಗ್” ಹಬ್ಬದ ಅಂಗವಾಗಿ ಬಾಬ್ ಲೈಟ್ ಉಳಿತಾಯ ಖಾತೆ – ಜೀವಮಾನ ಶೂನ್ಯ ಬ್ಯಾಲೆನ್ಸ್ ಉಳಿತಾಯ ಬ್ಯಾಂಕ್ ಖಾತೆಯನ್ನು ಪರಿಚಯಿಸಿದೆ. ಗ್ರಾಹಕರಿಗೆ ಯಾವುದೇ ಕನಿಷ್ಟ ಬ್ಯಾಲೆನ್ಸ್ ಅಗತ್ಯವಿಲ್ಲದ ಬ್ಯಾಂಕಿಂಗ್ ಅನುಭವವನ್ನು ನೀಡುತ್ತದೆ.
ಇದಲ್ಲದೆ, ವಿವಿಧ ಗ್ರಾಹಕರ ವಿಭಾಗಗಳ ಅಗತ್ಯತೆಗಳನ್ನು ಪೂರೈಸಲು, ಖಾತೆಯಲ್ಲಿ ನಾಮಮಾತ್ರ ತ್ರೈಮಾಸಿಕ ಸರಾಸರಿ ಬ್ಯಾಲೆನ್ಸನ್ನು ನಿರ್ವಹಿಸುವ ಮೂಲಕ ಬಾಬ್ ಲೈಟ್ ಖಾತೆಯು ಜೀವಮಾನದ ಉಚಿತ ರುಪೇ ಪ್ಲಾಟಿನಂ ಡೆಬಿಟ್ ಕಾರ್ಡ್ನೊಂದಿಗೆ ಬರುತ್ತದೆ ಮತ್ತು ಖಾತೆದಾರರು ಜೀವಮಾನದ ಉಚಿತ ಕ್ರೆಡಿಟ್ ಕಾರ್ಡ್ ಅನ್ನು ಸಹ ಪಡೆಯಬಹುದು.
ಬಾಬ್ ಲೈಟ್ ಉಳಿತಾಯ ಖಾತೆಯು ಹಬ್ಬದ ಋತುವಿನಲ್ಲಿ ಕೊಡುಗೆಗಳೊಂದಿಗೆ ನೀಡಲಾಗುತ್ತಿದೆ. ‘ಬಾಬ್ ಕಿ ಸಂಗ್, ತ್ಯೋಹಾರ್ ಕಿ ಉಮಂಗ್’ ಹಬ್ಬದ ಪ್ರಚಾರದ ಭಾಗವಾಗಿ, ಬ್ಯಾಂಕ್ ಆಫ್ ಬರೋಡಾ ಎಲೆಕ್ಟ್ರಾನಿಕ್ಸ್, ಕನ್ಸೂಮರ್ ಡ್ಯೂರಬಲ್ಸ್, ಪ್ರಯಾಣ, ಆಹಾರ, ಫ್ಯಾಷನ್, ಮನರಂಜನೆ, ಜೀವನಶೈಲಿ, ದಿನಸಿ ಮತ್ತು ಆರೋಗ್ಯದಂತಹ ವಿಭಾಗಗಳಲ್ಲಿ ಪ್ರಮುಖ ಗ್ರಾಹಕ ಬ್ರಾö್ಯಂಡ್‌ಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಬ್ಯಾಂಕ್ ಆಫ್ ಬರೋಡಾ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಗಳಲ್ಲಿ ಆಕರ್ಷಕ ಕೊಡುಗೆಗಳು ಮತ್ತು ರಿಯಾಯಿತಿಗಳನ್ನು ನೀಡುತ್ತದೆ. ಹಬ್ಬದ ಪ್ರಚಾರವು ೩೧ನೇ ಡಿಸೆಂಬರ್, ೨೦೨೩ರವರೆಗೆ ನಡೆಯಲಿದೆ ಮತ್ತು ಕಾರ್ಡ್ ದಾರರು ರಿಲಯನ್ಸ್ ಡಿಜಿಟಲ್, ಕ್ರೋಮಾ, ಮೇಕ್‌ಮೈಟ್ರಿಪ್, ಅಮೇಜಾನ್, ಬುಕ್‌ಮೈಶೋ, ಮಿಂತ್ರ, ಸ್ವಿಗ್ಗಿ, ಝೋಮೆಟೊ ಮತ್ತು ಇತರ ಬ್ರಾಂಡ್‌ಗಳಿಂದ ವಿಶೇಷ ಕೊಡುಗೆಗಳಲ್ಲಿ ಆನಂದಿಸಬಹುದು.
ಬ್ಯಾಂಕ್ ಆಫ್ ಬರೊಡಾದ ರಿಟೈಲ್ ಲಯಾಬಿಲಿಟೀಸ್ ಮತ್ತು ಎನ್‌ಆರ್‌ಐ ವ್ಯವಹಾರದ ಮುಖ್ಯ ಪ್ರಧಾನ ವ್ಯವಸ್ಥಾಪಕ ಶ್ರೀ ರವೀಂದ್ರ ಸಿಂಗ್ ನೇಗಿ ಇವರು ೧೦ ವರ್ಷಕ್ಕಿಂತ ಮೇಲ್ಪಟ್ಟ ಅಪ್ರಾಪ್ತ ವಯಸ್ಕರು ಸೇರಿದಂತೆ ಯಾವುದೇ ನಿವಾಸಿ ಖಾತೆಯನ್ನು ತೆರೆಯಬಹುದು. ಹೊಸ ಪೀಳಿಗೆಗೆ ಔಪಚಾರಿಕ ಬ್ಯಾಂಕಿಂಗ್ ಪರಿಸರ ವ್ಯವಸ್ಥೆಗೆ ಬಾಬ್ ಲೈಟ್ ಬಾಗಿಲು ತೆರೆಯುತ್ತದೆ ಮಹತ್ವಾಕಾಂಕ್ಷಿ ಭಾರತೀಯರ ಬ್ಯಾಂಕಿಂಗ್ ಅಗತ್ಯಗಳನ್ನು ಪೂರೈಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು