9:16 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಕೊರಗಜ್ಜ ಚಿತ್ರೀಕರಣ: ನಟಿ ಶುಭಾ ಪೂಂಜ ಜತೆ ಯುವಕರ ಗುಂಪು ಅಸಭ್ಯ ವರ್ತನೆ; ಶೂಟಿಂಗ್ ರದ್ದು

29/10/2023, 08:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖದಲ್ಲಿ ಕೊರಗಜ್ಜದ ಚಿತ್ರದ ಹಾಡಿನ ಚಿತ್ರೀಕರಣದ ವೇಳೆ
ನಟಿ ಶುಭಾ ಪೂಂಜಾ ಅವರೊಂದಿಗೆ ಕೆಲವು ಕಿಡಿಗೇಡಿಗಳು ಅಸಭ್ಯ ವರ್ತಿಸಿದ ಘಟನೆ ನಡೆದಿದೆ.

ಕುದುರೆಮುಖದ ಮೈದಾಡಿ ಗುಡ್ಡದಲ್ಲಿ ಹಾಡಿನ ಚಿತ್ರೀಕರಣ ನಡೆಯುತ್ತಿತ್ತು. ನಟಿ ಶುಭಾ ಪೂಂಜಾ ಡ್ಯಾನ್ಸ್ ಮಾಡುವ ವೇಳೆಯಲ್ಲಿ ಅಪರಿಚಿತ ಯುವಕರ ಗುಂಪೊಂದು ಅವರ ಕೈ ಹಿಡಿದು ಎಳೆದಿದ್ದಾರೆ ಎಂದು ಆರೋಪಿಸಲಾಗಿದೆ. ಯುವಕರ ಅಸಭ್ಯ ವರ್ತನೆಯಿಂದ ಹಾಡಿನ ಚಿತ್ರೀಕರಣವನ್ನು ಚಿತ್ರತಂಡ ನಿಲ್ಲಿಸಿದೆ. ಸುಧೀರ್ ಅತ್ತಾವರ ನಿರ್ದೇಶನದಲ್ಲಿ ಕೊರಗಜ್ಜ ಚಿತ್ರ ಚಿತ್ರೀಕರಣ ನಡೆಯುತ್ತಿತ್ತು.
ಬಾಲಿವುಡ್ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಜೊತೆ ಶುಭಾ ಶೂಟಿಂಗ್ ನಡೆಸುವ ವೇಳೆ ನಡೆದ ಘಟನೆ ನಡೆದಿದೆ.
ಆದರೆ, ಚಿತ್ರತಂಡ ಪೊಲೀಸರಿಗೆ ದೂರು ನೀಡಿಲ್ಲ.
ಘಟನೆ ಬಗ್ಗೆ ನಿರ್ದೇಶಕ ಸುಧೀರ್ ಅತ್ತಾವರ ಮಾತನಾಡಿ, ಘಟನೆ ಮನಸ್ಸಿಗೆ ಅತ್ಯಂತ ನೋವು ಉಂಟು ಮಾಡಿದೆ. ಯಾವುದೋ ಉದ್ದೇಶದಿಂದ ಯುವಕರು ಅಸಭ್ಯ ವರ್ತನೆ ಮಾಡಿದ್ದಾರೆ.
ಇದರಿಂದ ಚಿತ್ರಿಕರಣವನ್ನೇ ನಿಲ್ಲಿಸಬೇಕಾದಂತ ಪರಿಸ್ಥಿತಿ ನಿರ್ಮಾಣವಾಯಿತು. ಹಾಡಿನ ಚಿತ್ರೀಕರಣಕ್ಕಾಗಿ 50 ಜನ ಕಲಾವಿದರು, ಖ್ಯಾತ ಕೊರಿಯೋಗ್ರಾಫರ್ ಗಣೇಶ ಆಚಾರ್ಯ ಕೂಡ ಇದ್ದರು. ಬಿಜೆಪಿ ಪಕ್ಷದ ಸಾಗರ ಘಟಕವೆಂದು ಹೇಳಿಕೊಂಡು ಕೆಲ ಯುವಕರು ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ಸುಧೀರ್ ಅತ್ತಾವರ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು