11:15 PM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಕಾಡಾನೆ, ಹುಲಿ, ಮಂಗ ಸರದಿ ಆಯ್ತು, ಇದೀಗ ಕಾಡುಕೋಣ ಕಾಟ: ಭಯಭೀತರಾದ ಅತ್ತಿಗೆರೆ ಸುತ್ತಮುತ್ತ ಕಾಫಿ ತೋಟ ಕಾರ್ಮಿಕರು

29/10/2023, 15:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಾಫಿನಾಡು ಭಾಗದಲ್ಲಿ ಕಾಡಾನೆ, ಹುಲಿ, ಮಂಗಗಳ ಕಾಟ ಹೆಚ್ಚಾಗಿದ್ದು ತೋಟ ಕಾರ್ಮಿಕರು ಕೆಲಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಕಳೆದ ಬಾರಿ ಬಣಕಲ್ ಸಮೀಪದ ಕಾಡುಗದ್ದೆ, ಜಾವಳಿ ವ್ಯಾಪ್ತಿಯಲ್ಲಿನ ರಸ್ತೆಯಲ್ಲೇ ಕಾಡುಕೋಣಗಳ ಹಾವಳಿ ಕಂಡು ಬಂದಿತ್ತು. ಈಗ ಅತ್ತಿಗೆರೆಯ ವ್ಯಾಪ್ತಿಯಲ್ಲಿನ ಕಾಫಿ ತೋಟಗಳಲ್ಲಿ ಈಗ ಕಾಡುಕೋಣಗಳು ಕಾಣ ತೊಡಗಿವೆ.


ನಿತ್ಯ ಕೆಲಸಕ್ಕೆ ಸಾಗುತ್ತಿದ್ದ ಕೂಲಿ ಕಾರ್ಮಿಕರು ಶನಿವಾರ ತೋಟಗಳಲ್ಲಿ ಕಾಡುಕೋಣಗಳ ಹಿಂಡು ಕಂಡು ಭಯಭೀತರಾಗಿ ತೋಟಗಳಲ್ಲಿ ಕೆಲಸ ಮಾಡಲಾಗದೇ ವಾಪಾಸ್ ತೆರಳ ಬೇಕಾಯಿತು. ಅರಣ್ಯ ಸಿಬ್ಬಂದಿಗೂ ಮಾಹಿತಿ ನೀಡಿದ್ದು ಪಟಾಕಿ ಸಿಡಿಸಿ ಕಾಡುಕೋಣ ಕಾಡಿಗೆ ಓಡಿಸಲು ಪ್ರಯತ್ನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು