12:05 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಸ್ಫೋಟ: ಕರ್ನಾಟಕ ಗಡಿಯಲ್ಲಿ ನಿಗಾ ಇಡಲು ಪೊಲೀಸ್ ಇಲಾಖೆಗೆ ಗೃಹ ಸಚಿವ ಡಾ. ಪರಮೇಶ್ವರ್ ಸೂಚನೆ

29/10/2023, 17:19

ಮಂಗಳೂರು(reporterkarnataka.com): ಕೇರಳದಲ್ಲಿ ನಡೆದ ಸರಣಿ ಸ್ಫೋಟದ ಹಿನ್ನೆಲೆಯಲ್ಲಿ ಕೇರಳ- ಕರ್ನಾಟಕ ಗಡಿ ಪ್ರದೇಶದಲ್ಲಿ ಎಚ್ಚರ ವಹಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ನಗರದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಗಡಿಯಲ್ಲಿ ನಿಗಾ ಇಡಲು ಡಿಜಿ, ಐಜಿಯವರಿಗೆ ಸೂಚನೆ ನೀಡಲಾಗಿದೆ. ದಸರಾ ಸಂದರ್ಭದಲ್ಲಿ ಮಂಗಳೂರು, ಕೊಡಗು ಮತ್ತು ಮೈಸೂರಿನಲ್ಲಿ ಬೆದರಿಕೆ ಬಂದಿತ್ತು. ಆ ಮೂರು ಕಡೆಗಳಲ್ಲೂ ಸೂಕ್ತ ಕ್ರಮ ಕೈಗೊಳ್ಳಲಾಗಿತ್ತು ಎಂದು ಅವರು ನುಡಿದರು.
ರಾಜ್ಯ ಪೊಲೀಸ್ ಇಲಾಖೆಯಲ್ಲಿ 18 ಸಾವಿರ ಕಾನ್ ಸ್ಟೇಬಲ್ ಹುದ್ದೆ ಖಾಲಿ ಇದೆ. ಕಳೆದ 4-5 ವರ್ಷಗಳಿಂದ ಹೊಸ ನೇಮಕಾತಿ ನಡೆದಿಲ್ಲ. ಸಬ್ ಇನ್ಸ್ ಪೆಕ್ಟರ್ ಹುದ್ದೆ ಕೂಡ ಖಾಲಿ ಇದೆ. ಆದರೆ ಪಿಎಸ್ ಐ ನೇಮಕಾತಿ ಹಗರಣ ನ್ಯಾಯಾಲಯದಲ್ಲಿದೆ. ಸರಕಾರದ ಅಭಿಪ್ರಾಯವನ್ನು ಕೋರ್ಟ್ ಗೆ ತಿಳಿಸಲಾಗಿದೆ. ಆದರೆ, ನ್ಯಾಯಾಲಯ ಏನು ತೀರ್ಪು ನೀಡುತ್ತದೆ ಎಂಬುದನ್ನು ಕಾಯುತ್ತಿದ್ದೇವೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು