12:49 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ಕೇರಳದಲ್ಲಿ ಸ್ಫೋಟ: ಕರ್ನಾಟಕ ಗಡಿಯಲ್ಲಿ ನಿಗಾ ಇಡಲು ಪೊಲೀಸ್ ಇಲಾಖೆಗೆ ಗೃಹ ಸಚಿವ ಡಾ. ಪರಮೇಶ್ವರ್ ಸೂಚನೆ

29/10/2023, 17:19

ಮಂಗಳೂರು(reporterkarnataka.com): ಕೇರಳದಲ್ಲಿ ನಡೆದ ಸರಣಿ ಸ್ಫೋಟದ ಹಿನ್ನೆಲೆಯಲ್ಲಿ ಕೇರಳ- ಕರ್ನಾಟಕ ಗಡಿ ಪ್ರದೇಶದಲ್ಲಿ ಎಚ್ಚರ ವಹಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ನಗರದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಗಡಿಯಲ್ಲಿ ನಿಗಾ ಇಡಲು ಡಿಜಿ, ಐಜಿಯವರಿಗೆ ಸೂಚನೆ ನೀಡಲಾಗಿದೆ. ದಸರಾ ಸಂದರ್ಭದಲ್ಲಿ ಮಂಗಳೂರು, ಕೊಡಗು ಮತ್ತು ಮೈಸೂರಿನಲ್ಲಿ ಬೆದರಿಕೆ ಬಂದಿತ್ತು. ಆ ಮೂರು ಕಡೆಗಳಲ್ಲೂ ಸೂಕ್ತ ಕ್ರಮ ಕೈಗೊಳ್ಳಲಾಗಿತ್ತು ಎಂದು ಅವರು ನುಡಿದರು.
ರಾಜ್ಯ ಪೊಲೀಸ್ ಇಲಾಖೆಯಲ್ಲಿ 18 ಸಾವಿರ ಕಾನ್ ಸ್ಟೇಬಲ್ ಹುದ್ದೆ ಖಾಲಿ ಇದೆ. ಕಳೆದ 4-5 ವರ್ಷಗಳಿಂದ ಹೊಸ ನೇಮಕಾತಿ ನಡೆದಿಲ್ಲ. ಸಬ್ ಇನ್ಸ್ ಪೆಕ್ಟರ್ ಹುದ್ದೆ ಕೂಡ ಖಾಲಿ ಇದೆ. ಆದರೆ ಪಿಎಸ್ ಐ ನೇಮಕಾತಿ ಹಗರಣ ನ್ಯಾಯಾಲಯದಲ್ಲಿದೆ. ಸರಕಾರದ ಅಭಿಪ್ರಾಯವನ್ನು ಕೋರ್ಟ್ ಗೆ ತಿಳಿಸಲಾಗಿದೆ. ಆದರೆ, ನ್ಯಾಯಾಲಯ ಏನು ತೀರ್ಪು ನೀಡುತ್ತದೆ ಎಂಬುದನ್ನು ಕಾಯುತ್ತಿದ್ದೇವೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು