6:42 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕೇರಳ ಸ್ಫೋಟಕ್ಕೆ ಅತೀಯಾದ ತುಷ್ಟೀಕರಣದ ರಾಜಕಾರಣವೇ ಕಾರಣ: ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ

29/10/2023, 20:08

ಮಂಗಳೂರು(reporter Karnataka.com): ಓಟು ಬ್ಯಾಂಕ್ ರಾಜಕಾರಣ ಹಾಗೂ ಅಲ್ಪಸಂಖ್ಯಾತ ಸಮುದಾಯದ ತುಷ್ಟೀಕರಣದ ಪರಿಣಾಮ ಕೇರಳದಲ್ಲಿ ಬಾಂಬ್ ಸ್ಫೋಟಕ್ಕೆ ಕಾರಣ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್, ಎಡಪಕ್ಷಗಳು ಹಾಗೂ ಮುಸ್ಲಿಂ ಲೀಗ್ ನಂತಹ ಪಕ್ಷಗಳು ಎಡಬಿಡಂಗಿ ನೀತಿಯನ್ನು ಇನ್ನಾದರೂ ನಿಲ್ಲಿಸಬೇಕು.ಕಣ್ಣಿದ್ದು ಕುರುಡನಂತೆ ವರ್ತಿಸಿದರೆ ಮತ್ತಷ್ಟು ಬಾಂಬ್ ಸ್ಫೋಟವಾಗುದು ಖಚಿತ.
ಕೇರಳ ಉಗ್ರರ ಸ್ಲೀಪರ್ ಸೆಲ್ ಆಗಿ ಪರಿವರ್ತನೆಯಾಗಿದ್ದು ದೇಶದ್ರೋಹಿ ಸಂಘಟನೆಗಳು ಇಲ್ಲಿಂದಲೇ ಕಾರ್ಯಾಚರಿಸುತ್ತಿವೆ.
ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಾಗ ಕೇರಳ ಲಿಂಕ್ ಕೇಳಿ ಬಂದಿತ್ತು.
ಇಷ್ಟೆಲ್ಲಾ ಅದರೂ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಉಗ್ರರ ಪರವಾದ ಹೇಳಿಕೆ ನೀಡುತ್ತಲೇ ಬಂದಿತ್ತು ಮಾತ್ರವಲ್ಲ.ರಾಜ್ಯದಲ್ಲಿ ಬೇರೆ ಬೇರೆ ಕಡೆ ನಡೆದ ಹಿಂಸಾಚಾರ ಪ್ರಕರಣದಲ್ಲಿ ಪಾಲ್ಗೊಂಡವರ ಮೇಲಿನ ಕೇಸು ಹಿಂಪಡೆಯಲೂ ಮುಂದಾಗಿದೆ.
ಇದೆಲ್ಲಾ ಜಿಹಾದಿ ಮನಸ್ಥಿತಿಯ ಕಿರಾತಕರು ಮತ್ತೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗಿದ್ದಾರೆ ಎಂದರು.
ಪ್ರಕರಣದ ಕುರಿತು ಕೂಡಲೇ ಎನ್ ಐ ಎ ತನಿಖೆ ನಡೆಸಬೇಕು.
ಭಾರತ ಇಸ್ರೇಲ್ ಗೆ ಬೆಂಬಲ ನೀಡಿದ ಕಾರಣ ಸ್ಫೋಟವಾಯಿತೇ
ಎಂಬುದರ ಬಗ್ಗೆ ಕೂಲಂಕುಷ ತನಿಖೆ ಅಗತ್ಯ. ಈ ನಿಟ್ಟಿನಲ್ಲಿ ಇದರ ತನಿಖೆಯನ್ನು ಎನ್ ಐ ಗೆ ಒಪ್ಪಿಸಬೇಕು ಎಂದು ಹೇಳಿಕೆಯಲ್ಲಿ ಡಾ.ಭರತ್ ಶೆಟ್ಟಿ ವೈ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು