12:32 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಗುಡುಗು ಸಹಿತ ಮಳೆ: ಮನೆಗೆ ಸಿಡಿಲು ಬಡಿದು ಹಾನಿ

29/10/2023, 23:33

ಕಾರ್ಕಳ(reporterkarnataka.com): ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಗುಡುಗು ಸಹಿತ  ಸಾಮಾನ್ಯ ಮಳೆಯಾಗಿದ್ದು, ಕಣಂಜಾರು ಗ್ರಾಮದ ಪೆಲತ್ತೂರು ಪಟ್ಲದ ಮನೆಯೊಂದಕ್ಕೆ ಸಿಡಿಲು ಬಡಿದು ಸಾವಿರಾರು ರೂಪಾಯಿ ಮೌಲ್ಯದ ಸೊತ್ತು ಹಾನಿಯಾಗಿದೆ.
ಬಜಗೋಳಿ, ನಾರಾವಿ , ಮಾಳ ಚೌಕಿ ಕಡಾರಿ , ಕೆರುವಾಶೆ , ಶಿರ್ಲಾಲು , ಈದು, ಕಣಂಜಾರು , ಗಾಳಿ ಸಿಡಿಲಿನಿಂದ ಆವೃತವಾದ ಮಳೆ ಸುರಿದಿದೆ. ಕೆಲವು ಕಡೆಗಳಲ್ಲಿ ಮಳೆಯಿಂದ ಹಾನಿ ಸಂಭವಿದಿದೆ.


ಹೆಬ್ರಿ ತಾಲೂಕಿನಲ್ಲಿ ಮಳೆಯಾಗಿದ್ದು,ಭಾನುವಾರ ಕೆಲವೆಡೆ ತುಂತುರು ಮಳೆ ಸುರಿದಿದ್ದು, ವರಂಗ ಗ್ರಾಪಂ ವ್ಯಾಪ್ತಿಯ ಮುನಿಯಾಲು, ನಾಡ್ಪಾಲು, ಕಬ್ಬಿನಾಲೆ ಭಾಗಗಳಲ್ಲಿ ಮಳೆಯಾಗಿದೆ.  ಕಾರ್ಕಳ ಹೆಬ್ರಿ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಬಿಸಿಲಿನಿಂದ ಕೂಡಿದ ವಾತಾವರಣದಿಂದ  ತಂಪಾಗಿಸಿದೆ.
ಕಾರ್ಕಳ ತಾಲೂಕಿನ ಕಣಂಜಾರು ಗ್ರಾಮದ ಪೆಲತ್ತೂರು ಪಟ್ಲ ದೇವೇಂದ್ರ ನಾಯಕ್ ಎಂಬವರ ಮನೆಯ ಪಕ್ಕದಲ್ಲಿ ಸಿಡಿಲು ಬಡಿದಿದ್ದು, ಈ ಮೂಲಕ ಸಾವಿರಾರು ಮೌಲ್ಯದ ವಿದ್ಯುತ್ ಉಪಕರಣಗಳು ಹಾನಿಗೀಡಾಗಿವೆ.
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ: ಕಾರ್ಕಳ ಹಾಗೂ ಹೆಬ್ರಿಯಲ್ಲಿ ಸಿಡಿಲಿನ ಆರ್ಭಟಕ್ಕೆ ವಿದ್ಯುತ್ ಪೂರೈಕೆ ಯಲ್ಲಿ ವ್ಯತ್ಯಯವಾಗಿದ್ದು ಜನಸಾಮಾನ್ಯರು ತೊಂದರೆಗೀಡಾದರು.

ಇತ್ತೀಚಿನ ಸುದ್ದಿ

ಜಾಹೀರಾತು