6:21 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಗುಡುಗು ಸಹಿತ ಮಳೆ: ಮನೆಗೆ ಸಿಡಿಲು ಬಡಿದು ಹಾನಿ

29/10/2023, 23:33

ಕಾರ್ಕಳ(reporterkarnataka.com): ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಗುಡುಗು ಸಹಿತ  ಸಾಮಾನ್ಯ ಮಳೆಯಾಗಿದ್ದು, ಕಣಂಜಾರು ಗ್ರಾಮದ ಪೆಲತ್ತೂರು ಪಟ್ಲದ ಮನೆಯೊಂದಕ್ಕೆ ಸಿಡಿಲು ಬಡಿದು ಸಾವಿರಾರು ರೂಪಾಯಿ ಮೌಲ್ಯದ ಸೊತ್ತು ಹಾನಿಯಾಗಿದೆ.
ಬಜಗೋಳಿ, ನಾರಾವಿ , ಮಾಳ ಚೌಕಿ ಕಡಾರಿ , ಕೆರುವಾಶೆ , ಶಿರ್ಲಾಲು , ಈದು, ಕಣಂಜಾರು , ಗಾಳಿ ಸಿಡಿಲಿನಿಂದ ಆವೃತವಾದ ಮಳೆ ಸುರಿದಿದೆ. ಕೆಲವು ಕಡೆಗಳಲ್ಲಿ ಮಳೆಯಿಂದ ಹಾನಿ ಸಂಭವಿದಿದೆ.


ಹೆಬ್ರಿ ತಾಲೂಕಿನಲ್ಲಿ ಮಳೆಯಾಗಿದ್ದು,ಭಾನುವಾರ ಕೆಲವೆಡೆ ತುಂತುರು ಮಳೆ ಸುರಿದಿದ್ದು, ವರಂಗ ಗ್ರಾಪಂ ವ್ಯಾಪ್ತಿಯ ಮುನಿಯಾಲು, ನಾಡ್ಪಾಲು, ಕಬ್ಬಿನಾಲೆ ಭಾಗಗಳಲ್ಲಿ ಮಳೆಯಾಗಿದೆ.  ಕಾರ್ಕಳ ಹೆಬ್ರಿ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಬಿಸಿಲಿನಿಂದ ಕೂಡಿದ ವಾತಾವರಣದಿಂದ  ತಂಪಾಗಿಸಿದೆ.
ಕಾರ್ಕಳ ತಾಲೂಕಿನ ಕಣಂಜಾರು ಗ್ರಾಮದ ಪೆಲತ್ತೂರು ಪಟ್ಲ ದೇವೇಂದ್ರ ನಾಯಕ್ ಎಂಬವರ ಮನೆಯ ಪಕ್ಕದಲ್ಲಿ ಸಿಡಿಲು ಬಡಿದಿದ್ದು, ಈ ಮೂಲಕ ಸಾವಿರಾರು ಮೌಲ್ಯದ ವಿದ್ಯುತ್ ಉಪಕರಣಗಳು ಹಾನಿಗೀಡಾಗಿವೆ.
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ: ಕಾರ್ಕಳ ಹಾಗೂ ಹೆಬ್ರಿಯಲ್ಲಿ ಸಿಡಿಲಿನ ಆರ್ಭಟಕ್ಕೆ ವಿದ್ಯುತ್ ಪೂರೈಕೆ ಯಲ್ಲಿ ವ್ಯತ್ಯಯವಾಗಿದ್ದು ಜನಸಾಮಾನ್ಯರು ತೊಂದರೆಗೀಡಾದರು.

ಇತ್ತೀಚಿನ ಸುದ್ದಿ

ಜಾಹೀರಾತು