5:00 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬೆಂಗಳೂರು: ಭಾರೀ ಅಗ್ನಿ ದುರಂತ; 30ಕ್ಕೂ ಹೆಚ್ಚು ಬಸ್ಸುಗಳು ಸುಟ್ಟು ಕರಕಲು; ನಗರಕ್ಕೆ ಹಬ್ಬಿದ ದಟ್ಟ ಕಪ್ಪು ಹೊಗೆ

30/10/2023, 21:30

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಬೆಂಗಳೂರಿನ ವೀರಭದ್ರ ನಗರದಲ್ಲಿ ಇಂದು ಸಂಭವಿಸಿದ ಭಾರೀ ಅಗ್ನಿ ಅನಾಹುತದಲ್ಲಿ 30ಕ್ಕೂ ಹೆಚ್ಚು ಬಸ್ ಗಳು ಸುಟ್ಟು ಕರಕಲಾಗಿವೆ.


ವೀರಭದ್ರ ನಗರದ ಎಸ್.ವಿ. ಕೋಚ್ ತಯಾರಿಕಾ ಘಟಕದಲ್ಲಿ ಇಂದು ಬೆಳಗ್ಗೆ ಸುಮಾರು 11 ಗಂಟೆಯ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಮೊದಲಿಗೆ ಒಂದು ಬಸ್ಸಿಗೆ ತಗಲಿದ ಬೆಂಕಿ ನೋಡು ನೋಡುತ್ತಿದ್ದಂತೆ ಪಕ್ಕದಲ್ಲೇ ನಿಲ್ಲಿಸಿದ ಬಸ್ ಗಳಿಗೆ ಹಬ್ಬಿತು. ವೆಲ್ಡಿಂಗ್ ಮಾಡುವಾಗ ಹಾರಿದ ಕಿಡಿ ಬೆಂಕಿ ಅನಾಹುತಕ್ಕೆ ಕಾರಣ ಎನ್ನಲಾಗಿದೆ. ಆದರೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಮುಗಿಲೆತ್ತರಕ್ಕೆ ದಟ್ಟವಾದ ಕರಿಹೊಗೆ ಹಬ್ಬಿಕೊಂಡಿದೆ

ಇತ್ತೀಚಿನ ಸುದ್ದಿ

ಜಾಹೀರಾತು