10:52 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನೀವು ಕಿರು ಆಹಾರ ಸಂಸ್ಕರಣೆ ಉದ್ದಿಮೆದಾರರೇ?  ಉದ್ದಿಮೆ ವಿಸ್ತರಣೆ ಬಯಸುವಿರಾ?  ಹಾಗಾದರೆ ಸಿಗಲಿದೆ ನಿಮಗೆ ಸರಕಾರದ ಸಹಾಯಧನ !

31/07/2021, 07:28

ಮಂಗಳೂರು (reporterkarnataka.com): ಕಿರು ಆಹಾರ ಸಂಸ್ಕರಣೆ ಉದ್ದಿಮೆ ಸ್ಥಾಪಿಸಿಕೊಂಡು ಕಾರ್ಯ ನಿರ್ವಹಿಸುತ್ತಿರುವವರ ಉದ್ದಿಮೆಗಳನ್ನು ವಿಸ್ತರಿಸಿಕೊಳ್ಳಲು ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ.
ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ಈ ಸೌಲಭ್ಯ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ತೋಟಗಾರಿಕೆ ಉತ್ಪನ್ನಗಳನ್ನು ಬಳಸಿಕೊಂಡು ಉದ್ದಿಮೆ ನಿರ್ವಹಿಸುತ್ತಿರುವ ಗೇರು ಸಂಸ್ಕರಣೆ, ತೆಂಗಿನ ಎಣ್ಣೆಯ ಮಿಲ್‍ಗಳು, ಉಪ್ಪಿನಕಾಯಿ ತಯಾರಿ ಘಟಕ, ಜ್ಯೂಸ್ ತಯಾರಿ ಘಟಕ, ಸಾಂಬಾರು ಪುಡಿ ತಯಾರಿ ಘಟಕ, ಹಲಸಿನ ಹಪ್ಪಳ ಹಾಗೂ ಇತರೆ ಉತ್ಪನ್ನ ತಯಾರಿ ಘಟಕ, ಬಾಳೆಕಾಯಿ ಚಿಪ್ಸ್ ಹಾಗೂ ಇತರೆ ಉತ್ಪನ್ನ ತಯಾರಿ ಘಟಕ ಇತ್ಯಾದಿ ಘಟಕಗಳಿಗೆ ಈ ಯೋಜನೆಯಲ್ಲಿರುವ ವಿಪುಲ ಅವಕಾಶಗಳ ಕುರಿತು ಮಾಹಿತಿ ಶಿಬಿರ ಹಾಗೂ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಯೋಜನೆಯಡಿ ಉದ್ದಿಮೆದಾರರಿಗೆ ಅಗತ್ಯ ಸಂಪನ್ಮೂಲ ಮಾಹಿತಿ ಹಾಗೂ ಯೋಜನಾ ವರದಿ ತಯಾರಿಗೆ ನೆರವು ನೀಡಲಾಗುವುದು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು