3:10 AM Monday23 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ನೀವು ಕಿರು ಆಹಾರ ಸಂಸ್ಕರಣೆ ಉದ್ದಿಮೆದಾರರೇ?  ಉದ್ದಿಮೆ ವಿಸ್ತರಣೆ ಬಯಸುವಿರಾ?  ಹಾಗಾದರೆ ಸಿಗಲಿದೆ ನಿಮಗೆ ಸರಕಾರದ ಸಹಾಯಧನ !

31/07/2021, 07:28

ಮಂಗಳೂರು (reporterkarnataka.com): ಕಿರು ಆಹಾರ ಸಂಸ್ಕರಣೆ ಉದ್ದಿಮೆ ಸ್ಥಾಪಿಸಿಕೊಂಡು ಕಾರ್ಯ ನಿರ್ವಹಿಸುತ್ತಿರುವವರ ಉದ್ದಿಮೆಗಳನ್ನು ವಿಸ್ತರಿಸಿಕೊಳ್ಳಲು ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ.
ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ಈ ಸೌಲಭ್ಯ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ತೋಟಗಾರಿಕೆ ಉತ್ಪನ್ನಗಳನ್ನು ಬಳಸಿಕೊಂಡು ಉದ್ದಿಮೆ ನಿರ್ವಹಿಸುತ್ತಿರುವ ಗೇರು ಸಂಸ್ಕರಣೆ, ತೆಂಗಿನ ಎಣ್ಣೆಯ ಮಿಲ್‍ಗಳು, ಉಪ್ಪಿನಕಾಯಿ ತಯಾರಿ ಘಟಕ, ಜ್ಯೂಸ್ ತಯಾರಿ ಘಟಕ, ಸಾಂಬಾರು ಪುಡಿ ತಯಾರಿ ಘಟಕ, ಹಲಸಿನ ಹಪ್ಪಳ ಹಾಗೂ ಇತರೆ ಉತ್ಪನ್ನ ತಯಾರಿ ಘಟಕ, ಬಾಳೆಕಾಯಿ ಚಿಪ್ಸ್ ಹಾಗೂ ಇತರೆ ಉತ್ಪನ್ನ ತಯಾರಿ ಘಟಕ ಇತ್ಯಾದಿ ಘಟಕಗಳಿಗೆ ಈ ಯೋಜನೆಯಲ್ಲಿರುವ ವಿಪುಲ ಅವಕಾಶಗಳ ಕುರಿತು ಮಾಹಿತಿ ಶಿಬಿರ ಹಾಗೂ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಯೋಜನೆಯಡಿ ಉದ್ದಿಮೆದಾರರಿಗೆ ಅಗತ್ಯ ಸಂಪನ್ಮೂಲ ಮಾಹಿತಿ ಹಾಗೂ ಯೋಜನಾ ವರದಿ ತಯಾರಿಗೆ ನೆರವು ನೀಡಲಾಗುವುದು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು