10:01 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಕಾರ್ಯಕ್ರಮ

31/10/2023, 21:34

ಬಂಟ್ವಾಳ(reporterkarnataka.com): ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು, ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇಟ್ಟಾಗ ಮಾತ್ರ ಶೈಕ್ಷಣಿಕವಾಗಿ ಹಾಗೂ ಭೌತಿಕ ಅಭಿವೃದ್ಧಿಪಡಿಸಲು ಸಾಧ್ಯಗುತ್ತದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಹೇಳಿದರು.
ಅವರು ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಮುದಾಯದತ್ತ ಕಾರ್ಯಕ್ರಮದ ಶಾಲಾ ಶಿಕ್ಷಕ ರಕ್ಷಕ ಸಭೆಯನ್ನುದ್ದೇಶಿಸಿ ಮಾತನಾಡಿದರು.


ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಹಾಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ಪೋಷಕರೊಂದಿಗೆ ಮುಕ್ತವಾಗಿ ಚರ್ಚಿಸಿ ಸಲಹೆ ಅಭಿಪ್ರಾಯವನ್ನು ಪಡೆದು ಸದರಿ ವರ್ಷದ ಡಿಸೆಂಬರ್ ತಿಂಗಳ ಎರಡನೇ ವಾರದಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸುದೆಂದು ಪೋಷಕರ ಒಪ್ಪಿಗೆ ಮೇರೆಗೆ ಶಾಲಾಭಿವೃದ್ಧಿ ಸಮಿತಿಯ ಮೂಲಕ ನಿರ್ಣಯಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೊರಗಪ್ಪ ನಾಯ್ಕ್ ಸಿಂಗೇರಿ, ಶಾಲಾ ಶಿಕ್ಷಕರುಗಳಾದ ಶಕುಂತಲಾ ಎಂ. ಬಿ., ಸಂಗೀತಾ ಶರ್ಮಾ ಪಿ. ಜಿ., ಅನುಷಾ, ಮುರ್ಷಿದಾ ಬಾನು, ಮಮತಾ ಮೊದಲಾದವರು ಉಪಸ್ಥಿತರಿದ್ದರು. ಪೋಷಕರ ಪ್ರಶ್ನೆಗಳಿಗೆ ಮಾಹಿತಿಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು, ಶಾಲಾಭಿವೃದ್ಧಿಸಮಿತಿಯ ಸದಸ್ಯರುಗಳು ಹಾಜರಿದ್ದರು.ಶಿಕ್ಷಕಿ ಮಮತಾ ಸ್ವಾಗತಿಸಿದರು.ಶಿಕ್ಷಕಿ ಮುರ್ಷಿದಾ ಬಾನು ವಂದಿಸಿದರು. ಶಿಕ್ಷಕಿ ಸಂಗೀತಾ ಶರ್ಮ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು