7:13 AM Thursday9 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

ಆಳ್ವಾಸ್ ರಂಗ ಅಧ್ಯಯನ ಕೇಂದ್ರದಿಂದ ಡಾ. ಹಂ.ಪ.ನಾಗರಾಜಯ್ಯ ಅವರ ‘ಚಾರುವಸಂತ’ ಪ್ರಸ್ತುತಿ

31/10/2023, 23:25

ಮೂಡುಬಿದಿರೆ(reporterarnataka.com): ಸರ್ವ ಜನಾಂಗದ ಶಾಂತಿಯ ತೋಟವಾದ ಭಾರತದ ಕುಟುಂಬದ ಬಿಂಬ ‘ಚಾರು ವಸಂತ’ ಎಂದು ಹಿರಿಯ ಸಂಶೋಧಕ ಹಾಗೂ ಕೃತಿಕಾರ ಡಾ. ಹಂ.ಪ.ನಾಗರಾಜಯ್ಯ
(ಹಂಪನಾ)ಹೇಳಿದರು.

ಇಲ್ಲಿನ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರು ನಿರ್ದೇಶಕ ಜೀವನ್ ರಾಂ ಸುಳ್ಯ ಅವರ ನಿರ್ದೇಶನದಲ್ಲಿ ಪ್ರಸ್ತುತ ಪಡಿಸಿದ ತಮ್ಮ (ಡಾ.ಹಂ.ಪ.ನಾಗರಾಜಯ್ಯ) ‘ಚಾರುವಸಂತ’ ನಾಟಕವನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಇದು ನನ್ನ ಕನಸು ನನಸಾದ ದಿನ. ನಾನು ಯುವಕ ಅಲ್ಲ. ಆದರೆ, ‘ಬಯಸುತ್ತೇನೆ ನಿಮ್ಮ ಆಮ್ಲಜನಕ’ ಎಂದು ಭಾವುಕರಾದರು. ಭಾರತೀಯ ಮಾತ್ರವಲ್ಲ ಎಲ್ಲ ಕುಟುಂಬಗಳಲ್ಲೂ ಏಳುಗಾಲ ಹಾಗೂ ಬೀಳುಗಾಲ ಇರುತ್ತದೆ. ಏಳುಬೀಳುಗಳ ಜೀವನದ ಕಥನವೇ ‘ಚಾರುವಸಂತ’ ಎಂದರು.
ಎಲ್ಲ ಧರ್ಮ, ಮತವನ್ನು ಗೌರವಿಸಬೇಕು. ದ್ವೇಷ, ಅಸೂಯೆ, ಈರ್ಷೆ ಬಿಟ್ಟು ಬಿಡಬೇಕು. ಪರಿಸರ ಸಂರಕ್ಷಿಸಬೇಕು ಎಂಬ ಸಂದೇಶವಿದೆ ಎಂದರು. ಮೋಹನ ಆಳ್ವರ ಅಂತರಂಗಕ್ಕೆ ಬಿದ್ದ ಯಾವುದೇ ಕಲೆಯು ಕೃತಿಯಾಗುತ್ತದೆ ಎಂದು ಅವರು ಶ್ಲಾಘಿಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮಾತನಾಡಿ, ಕೃತಿಗಳು ಹೆಚ್ಚು ಮಾತನಾಡಬೇಕು. ವ್ಯಕ್ತಿಗಳಲ್ಲ ಎಂದರು. ಪರಿಸರ ರಕ್ಷಣೆಯ ಮಹತ್ವ ನಾಟಕದಲ್ಲಿದೆ. ಧರ್ಮ, ಜಾತಿ ಮುಖ್ಯವಲ್ಲ, ಸೌಹಾರ್ದತೆ ಮುಖ್ಯ. ಸುಖ- ದುಖ ಸಮಾನವಾಗಿ ಸ್ವೀಕರಿಸಿ ಎಂಬ ಸಂದೇಶ ನಾಟಕದಲ್ಲಿದೆ ಎಂದರು.
ಹಂಪನಾ ಅವರು ಆಳ್ವಾಸ್ ನುಡಿಸಿರಿಯ ಸರ್ವಾಧ್ಯಕ್ಷತೆ ವಹಿಸಿದ್ದರು. ಅವರ ಪತ್ನಿ ಕಮಲಾ ಹಂಪನಾ ಮೂಡುಬಿದಿರೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ರಾಗಿದ್ದರು. ಅವರ ಕುಟುಂಬದ ಜೊತೆ ನಮಗೆಲ್ಲ ಅವಿನಾಭಾವ ನಂಟಿದ ಎಂದು ನೆನಪಿಸಿಕೊಂಡರು.
ನಾಟಕ ಎಂದರೆ ನಿರ್ದೇಶಕನ ಕೈಚಳಕ. ಜೀವನ್ ರಾಂ ಸುಳ್ಯ ಅವರು ನಾಟಕವನ್ನು ರಂಗ ರೂಪಕ್ಕೆ ತಂದ ಬೆರಗನ್ನು ನೋಡಿದರೆ ಹಂಪನಾ ಮೂಕವಿಸ್ಮಿತರಾಗುವರು ಎಂದು ಶ್ಲಾಘಿಸಿದರು.
ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್ ರಾಂ ಸುಳ್ಯ ಮಾತನಾಡಿ, ೨೦೦೩ರಲ್ಲಿ ಹಂಪನಾ ಬರೆದ ಚಾರುವಸಂತವನ್ನು ಡಾ.ಎಂ.ಮೋಹನ ಆಳ್ವರ ಆಶಯದಂತೆ ನಿರ್ದೇಶಿಸಲಾಗಿದೆ. ರಂಗಕರ್ಮಿ ಡಾ. ನಾ.ದಾ. ಶೆಟ್ಟಿ ರಂಗರೂಪ ನೀಡಿದ್ದಾರೆ. ಸುಮಾರು ಎರಡು ವರ್ಷಗಳ ಈ ಪಯಣವು ಮೂಡುಬಿದಿರೆ ಮೂಲಕ ರಾಜ್ಯದಾದ್ಯಂತ ತಿರುಗಾಟ ನಡೆಸಲಿದೆ ಎಂದರು.
ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಮಹಮ್ಮದ್ ಸದಾಕತ್ ಇದ್ದರು. ಉಪನ್ಯಾಸಕ ವೇಣುಗೋಪಾಲ ಕೆ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಎಲ್ಲೆಲ್ಲಿ?: ಚಾರುವಸಂತ ನಾಟಕವು
ನ.೦೨ ರಂದು ರವೀಂದ್ರ ಕಲಾಕ್ಷೇತ್ರ ಬೆಂಗಳೂರು, ನ.೦೪ ಡಾ.ಎಚ್.ಎನ್.ಕಲಾಮಂದಿರ ಗೌರಿಬಿದನೂರು, ನ.೦೬ ಗುಬ್ಬಿ ವೀರಣ್ಣ ಕಲಾಮಂದಿರ ತುಮಕೂರು, ನ.೦೮ ರಂದು ತ.ರಾ.ಸು. ರಂಗಮAದಿರ ಚಿತ್ರದುರ್ಗ, ನ.೧೦ ರಂದು ಮಲ್ಲಿಕಾರ್ಜುನ ರಂಗಮAದಿರ ದಾವಣಗೆರೆ, ನ.೧೨ ಡಾ.ಪಾಟೀಲ ಪುಟ್ಟಪ್ಪ ಸಭಾಭವನ ಧಾರವಾಡ ಹಾಗೂ ನ.೧೫ ರಂದು ರಂಗಮನೆ ಸುಳ್ಯದಲ್ಲಿ ಪ್ರದರ್ಶನಗೊಳ್ಳಲಿದೆ

ಇತ್ತೀಚಿನ ಸುದ್ದಿ

ಜಾಹೀರಾತು