12:16 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಂಗಳೂರಿನ ವೈದ್ಯ ಡಾ. ನೆಗಳಗುಳಿ ಅವರ ‘ಕಡಲ ಹೂವು’ ಗಜಲ್ ಸಂಕಲನ ಲೋಕಾರ್ಪಣೆ

01/11/2023, 11:08

ಮಂಗಳೂರು(reporterkarnataka.com):
ಮಂಗಳೂರಿನ ಪಿ.ವಿ.ಪ್ರದೀಪ್ ಕುಮಾರ್ ಸಾರಥ್ಯದ ಕಥಾಬಿಂದು ಪ್ರಕಾಶನದ ಹದಿನಾರನೇ ವಾರ್ಷಿಕ ಸಾಹಿತ್ಯ ಸಂಭ್ರಮ ಸಮಾರಂಭದಲ್ಲಿ ಮಂಗಳೂರಿನ ವೈದ್ಯ ಡಾ. ಸುರೇಶ ನೆಗಳಗುಳಿ ಇವರ ಮೂರನೇಯ ಗಜಲ್ ಸಂಕಲನ ಕಡಲ ಹೂವು ನಗರದ ಪುರ ಭವನದಲ್ಲಿ ಲೋಕಾರ್ಪಣೆ ಗೊಂಡಿತು.
ಪಾಣೆಮಂಗಳೂರಿನ ರೈತ ಸೇವಾ ಸಂಘದ ಮುಖ್ಯಸ್ಥ ಜಯಶಂಕರ ಬಾಸ್ರಿತ್ತಾಯ ಬಿಡುಗಡೆಗೊಳಿಸಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಷ ಪುನರೂರು, ಕಿನ್ಮಿಗೋಳಿ ಯುಗ ಪುರುಷದ
ಭುವನಾಭಿರಾಮ ಉಡುಪ, ಮೂಡಬಿದಿರೆಯ ಧನಲಕ್ಷ್ಮೀ ಗೇರು ಬೀಜ ಮಾಲಕ ಶ್ರೀಪತಿ ಭಟ್ ಮತ್ತು ಪಿ.ವಿ. ಕುಮಾರ್ , ಕೊಳ್ಚಪ್ಪೆ ಗೋವಿಂದ ಭಟ್, ಜಯಾನಂದ ಪೆರಾಜೆ ಭಾಗಿಯಾದರು.
ಕೃತಿಕಾರ ಡಾ ಸುರೇಶ ನೆಗಳಗುಳಿಯವರು ತನ್ನ ಈ ಸಂಕಲನದಲ್ಲಿ ಕನ್ನಡ, ತುಳು, ಹವ್ಯಕ, ಇಂಗ್ಲಿಷ್, ಹಿಂದಿ, ಮಲಯಾಳಂ ಭಾಷೆಗಳ ವಿವಿಧ ಮಾದರಿಯ ಗಜಲ್ ಇರುವ ಬಗ್ಗೆ ತಿಳಿಸುತ್ತಾ ಅದರಲ್ಲೊಂದು ಗಜಲನ್ನು ವಾಚಿಸಿದರು.
ಬಳಿಕ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು
ರಶ್ಮಿ ಸನಿಲ್ ನಿರೂಪಣೆ ಗೈದ ಈ ಸಮಾರಂಭದಲ್ಲಿ ಹಾ.ಮ.ಸತೀಶ, ರತ್ನಾ ಭಟ್, ಕಲ್ಲಚ್ವು ಮಹೇಶ್ ನಾಯಕ್ , ರೇಖಾ ಸುದೇಶ ರಾವ್, ಚುಸಾಪ ಅಧ್ಯಕ್ಷ ಜಿ.ಕೆ. ಶಾಸ್ತ್ರಿ, ಸೌಮ್ಯಾ ಗೋಪಾಲ್, ನಾಡಿನ ಸಮಾಚಾರ ಪತ್ರಿಕೆಯ ಬಸವರಾಜ್ ಯಲ್ಲಪ್ಪಾ ಉಪ್ಪಾರಟ್ಟಿ, ರೇಮಂಡ್ ಡಿಕುನ್ಹ , ರಾಧಾಕೃಷ್ಣ ಉಳಿಯತ್ತಡ್ಕ , ವಾಮನ ರಾವ್ ಬೇಕಲ್, ವೀಣಾ ಕಾರಂತ ಮುಂತಾದವರು ಉಪಸ್ಥಿತರಿದ್ದರು.
ಇದೇ ಸಮಾರಂಭದಲ್ಲಿ ಐವತ್ತು ಕವಿಗಳ ಕೃತಿಗಳು ಲೋಕಾರ್ಪಿತವಾದುದು ವಿಶೇಷವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು