12:25 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮಂಗಳೂರಿನ ವೈದ್ಯ ಡಾ. ನೆಗಳಗುಳಿ ಅವರ ‘ಕಡಲ ಹೂವು’ ಗಜಲ್ ಸಂಕಲನ ಲೋಕಾರ್ಪಣೆ

01/11/2023, 11:08

ಮಂಗಳೂರು(reporterkarnataka.com):
ಮಂಗಳೂರಿನ ಪಿ.ವಿ.ಪ್ರದೀಪ್ ಕುಮಾರ್ ಸಾರಥ್ಯದ ಕಥಾಬಿಂದು ಪ್ರಕಾಶನದ ಹದಿನಾರನೇ ವಾರ್ಷಿಕ ಸಾಹಿತ್ಯ ಸಂಭ್ರಮ ಸಮಾರಂಭದಲ್ಲಿ ಮಂಗಳೂರಿನ ವೈದ್ಯ ಡಾ. ಸುರೇಶ ನೆಗಳಗುಳಿ ಇವರ ಮೂರನೇಯ ಗಜಲ್ ಸಂಕಲನ ಕಡಲ ಹೂವು ನಗರದ ಪುರ ಭವನದಲ್ಲಿ ಲೋಕಾರ್ಪಣೆ ಗೊಂಡಿತು.
ಪಾಣೆಮಂಗಳೂರಿನ ರೈತ ಸೇವಾ ಸಂಘದ ಮುಖ್ಯಸ್ಥ ಜಯಶಂಕರ ಬಾಸ್ರಿತ್ತಾಯ ಬಿಡುಗಡೆಗೊಳಿಸಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಷ ಪುನರೂರು, ಕಿನ್ಮಿಗೋಳಿ ಯುಗ ಪುರುಷದ
ಭುವನಾಭಿರಾಮ ಉಡುಪ, ಮೂಡಬಿದಿರೆಯ ಧನಲಕ್ಷ್ಮೀ ಗೇರು ಬೀಜ ಮಾಲಕ ಶ್ರೀಪತಿ ಭಟ್ ಮತ್ತು ಪಿ.ವಿ. ಕುಮಾರ್ , ಕೊಳ್ಚಪ್ಪೆ ಗೋವಿಂದ ಭಟ್, ಜಯಾನಂದ ಪೆರಾಜೆ ಭಾಗಿಯಾದರು.
ಕೃತಿಕಾರ ಡಾ ಸುರೇಶ ನೆಗಳಗುಳಿಯವರು ತನ್ನ ಈ ಸಂಕಲನದಲ್ಲಿ ಕನ್ನಡ, ತುಳು, ಹವ್ಯಕ, ಇಂಗ್ಲಿಷ್, ಹಿಂದಿ, ಮಲಯಾಳಂ ಭಾಷೆಗಳ ವಿವಿಧ ಮಾದರಿಯ ಗಜಲ್ ಇರುವ ಬಗ್ಗೆ ತಿಳಿಸುತ್ತಾ ಅದರಲ್ಲೊಂದು ಗಜಲನ್ನು ವಾಚಿಸಿದರು.
ಬಳಿಕ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು
ರಶ್ಮಿ ಸನಿಲ್ ನಿರೂಪಣೆ ಗೈದ ಈ ಸಮಾರಂಭದಲ್ಲಿ ಹಾ.ಮ.ಸತೀಶ, ರತ್ನಾ ಭಟ್, ಕಲ್ಲಚ್ವು ಮಹೇಶ್ ನಾಯಕ್ , ರೇಖಾ ಸುದೇಶ ರಾವ್, ಚುಸಾಪ ಅಧ್ಯಕ್ಷ ಜಿ.ಕೆ. ಶಾಸ್ತ್ರಿ, ಸೌಮ್ಯಾ ಗೋಪಾಲ್, ನಾಡಿನ ಸಮಾಚಾರ ಪತ್ರಿಕೆಯ ಬಸವರಾಜ್ ಯಲ್ಲಪ್ಪಾ ಉಪ್ಪಾರಟ್ಟಿ, ರೇಮಂಡ್ ಡಿಕುನ್ಹ , ರಾಧಾಕೃಷ್ಣ ಉಳಿಯತ್ತಡ್ಕ , ವಾಮನ ರಾವ್ ಬೇಕಲ್, ವೀಣಾ ಕಾರಂತ ಮುಂತಾದವರು ಉಪಸ್ಥಿತರಿದ್ದರು.
ಇದೇ ಸಮಾರಂಭದಲ್ಲಿ ಐವತ್ತು ಕವಿಗಳ ಕೃತಿಗಳು ಲೋಕಾರ್ಪಿತವಾದುದು ವಿಶೇಷವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು