11:39 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಮಂಗಳೂರಿನ ವೈದ್ಯ ಡಾ. ನೆಗಳಗುಳಿ ಅವರ ‘ಕಡಲ ಹೂವು’ ಗಜಲ್ ಸಂಕಲನ ಲೋಕಾರ್ಪಣೆ

01/11/2023, 11:08

ಮಂಗಳೂರು(reporterkarnataka.com):
ಮಂಗಳೂರಿನ ಪಿ.ವಿ.ಪ್ರದೀಪ್ ಕುಮಾರ್ ಸಾರಥ್ಯದ ಕಥಾಬಿಂದು ಪ್ರಕಾಶನದ ಹದಿನಾರನೇ ವಾರ್ಷಿಕ ಸಾಹಿತ್ಯ ಸಂಭ್ರಮ ಸಮಾರಂಭದಲ್ಲಿ ಮಂಗಳೂರಿನ ವೈದ್ಯ ಡಾ. ಸುರೇಶ ನೆಗಳಗುಳಿ ಇವರ ಮೂರನೇಯ ಗಜಲ್ ಸಂಕಲನ ಕಡಲ ಹೂವು ನಗರದ ಪುರ ಭವನದಲ್ಲಿ ಲೋಕಾರ್ಪಣೆ ಗೊಂಡಿತು.
ಪಾಣೆಮಂಗಳೂರಿನ ರೈತ ಸೇವಾ ಸಂಘದ ಮುಖ್ಯಸ್ಥ ಜಯಶಂಕರ ಬಾಸ್ರಿತ್ತಾಯ ಬಿಡುಗಡೆಗೊಳಿಸಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಷ ಪುನರೂರು, ಕಿನ್ಮಿಗೋಳಿ ಯುಗ ಪುರುಷದ
ಭುವನಾಭಿರಾಮ ಉಡುಪ, ಮೂಡಬಿದಿರೆಯ ಧನಲಕ್ಷ್ಮೀ ಗೇರು ಬೀಜ ಮಾಲಕ ಶ್ರೀಪತಿ ಭಟ್ ಮತ್ತು ಪಿ.ವಿ. ಕುಮಾರ್ , ಕೊಳ್ಚಪ್ಪೆ ಗೋವಿಂದ ಭಟ್, ಜಯಾನಂದ ಪೆರಾಜೆ ಭಾಗಿಯಾದರು.
ಕೃತಿಕಾರ ಡಾ ಸುರೇಶ ನೆಗಳಗುಳಿಯವರು ತನ್ನ ಈ ಸಂಕಲನದಲ್ಲಿ ಕನ್ನಡ, ತುಳು, ಹವ್ಯಕ, ಇಂಗ್ಲಿಷ್, ಹಿಂದಿ, ಮಲಯಾಳಂ ಭಾಷೆಗಳ ವಿವಿಧ ಮಾದರಿಯ ಗಜಲ್ ಇರುವ ಬಗ್ಗೆ ತಿಳಿಸುತ್ತಾ ಅದರಲ್ಲೊಂದು ಗಜಲನ್ನು ವಾಚಿಸಿದರು.
ಬಳಿಕ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು
ರಶ್ಮಿ ಸನಿಲ್ ನಿರೂಪಣೆ ಗೈದ ಈ ಸಮಾರಂಭದಲ್ಲಿ ಹಾ.ಮ.ಸತೀಶ, ರತ್ನಾ ಭಟ್, ಕಲ್ಲಚ್ವು ಮಹೇಶ್ ನಾಯಕ್ , ರೇಖಾ ಸುದೇಶ ರಾವ್, ಚುಸಾಪ ಅಧ್ಯಕ್ಷ ಜಿ.ಕೆ. ಶಾಸ್ತ್ರಿ, ಸೌಮ್ಯಾ ಗೋಪಾಲ್, ನಾಡಿನ ಸಮಾಚಾರ ಪತ್ರಿಕೆಯ ಬಸವರಾಜ್ ಯಲ್ಲಪ್ಪಾ ಉಪ್ಪಾರಟ್ಟಿ, ರೇಮಂಡ್ ಡಿಕುನ್ಹ , ರಾಧಾಕೃಷ್ಣ ಉಳಿಯತ್ತಡ್ಕ , ವಾಮನ ರಾವ್ ಬೇಕಲ್, ವೀಣಾ ಕಾರಂತ ಮುಂತಾದವರು ಉಪಸ್ಥಿತರಿದ್ದರು.
ಇದೇ ಸಮಾರಂಭದಲ್ಲಿ ಐವತ್ತು ಕವಿಗಳ ಕೃತಿಗಳು ಲೋಕಾರ್ಪಿತವಾದುದು ವಿಶೇಷವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು