4:52 PM Tuesday5 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

ಅತ್ತಿಗೆರೆ, ಕೊಟ್ಟಿಗೆಹಾರ ಸುತ್ತಮುತ್ತ ಕಾಡುಕೋಣಗಳ ಹಾವಳಿ, ಅರಣ್ಯ ಅಧಿಕಾರಿಗಳಿಂದ ಕೂಂಬಿಂಗ್ ಕಾರ್ಯಾಚರಣೆ

02/11/2023, 11:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದ ದೇವನಗೂಲ್, ಅತ್ತಿಗೆರೆ ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ನಿತ್ಯ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು, ಹಾವಳಿ ನಿಯಂತ್ರಿಸುವಂತೆ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು.


ಬೆಳೆಗಾರರಾದ ಕಾರ್ತಿಕ್ ಅತ್ತಿಗೆರೆ ಮಾತನಾಡಿ ‘ ನಿತ್ಯ ಕಾಫಿ ತೋಟಗಳಲ್ಲಿ ಕಾಡುಕೋಣಗಳು ನಿರ್ಭೀತಿಯಿಂದ ಸಂಚರಿಸುತ್ತಿವೆ. ತೋಟ ಕಾರ್ಮಿಕರು ಕೂಡ ಕೆಲಸಕ್ಕೆ ಬರಲು ಭಯ ಪಡುವಂತಾಗಿದೆ. ಕಾಡಾನೆ, ಹುಲಿಗಳ ಕಾಟದಿಂದ ಈ ಭಾಗದ ಬಣಕಲ್, ಹೆಗ್ಗುಡ್ಲು, ಭಾರತೀಬೈಲ್ ಸುತ್ತಮುತ್ತ ಜನರು ರೋಸಿ ಹೋಗಿದ್ದಾರೆ . ಈಗ ಕಾಡುಕೋಣಗಳ ಹಾವಳಿಯಿಂದ ತೋಟಗಾರಿಕೆ ಕೃಷಿಗೂ ಹೊಡೆತ ಬಿದ್ದಂತಾಗಿದೆ’ ಎಂದರು. ಬುಧವಾರ ಅರಣ್ಯ ಅಧಿಕಾರಿ ಉಪವಲಯ ಅರಣ್ಯಾಧಿಕಾರಿ ಉಮೇಶ್ ನೇತೃತ್ವದ ತಂಡ ಸ್ಥಳಕ್ಕೆ ಆಗಮಿಸಿ ಅತ್ತಿಗೆರೆ, ದೇವನಗೂಲ್ ಸುತ್ತಮುತ್ತ ಗುಡ್ಡದ ತೋಟಗಳಲ್ಲಿ ಪಟಾಕಿ ಸಿಡಿಸಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿ ಪಟಾಕಿ ಸಿಡಿಸಿ ಕಾಡುಕೋಣಗಳನ್ನು ಕಾಡಿಗೆ ಅಟ್ಟಲು ಕಾರ್ಯಾಚರಣೆ ಆರಂಭಿಸಿದರು. ಉಪ ವಲಯ ಅರಣ್ಯ ಅಧಿಕಾರಿ ಉಮೇಶ್,ಗಸ್ತು ಅರಣ್ಯ ಪಾಲಕರಾದ ಮೋಸಿನ್, ಜಯಪ್ಪ ಅರಣ್ಯ ವೀಕ್ಷಕರಾದ ಕೃಷ್ಣಮೂರ್ತಿ ಗಿರೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು