7:42 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಅತ್ತಿಗೆರೆ, ಕೊಟ್ಟಿಗೆಹಾರ ಸುತ್ತಮುತ್ತ ಕಾಡುಕೋಣಗಳ ಹಾವಳಿ, ಅರಣ್ಯ ಅಧಿಕಾರಿಗಳಿಂದ ಕೂಂಬಿಂಗ್ ಕಾರ್ಯಾಚರಣೆ

02/11/2023, 11:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದ ದೇವನಗೂಲ್, ಅತ್ತಿಗೆರೆ ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ನಿತ್ಯ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು, ಹಾವಳಿ ನಿಯಂತ್ರಿಸುವಂತೆ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು.


ಬೆಳೆಗಾರರಾದ ಕಾರ್ತಿಕ್ ಅತ್ತಿಗೆರೆ ಮಾತನಾಡಿ ‘ ನಿತ್ಯ ಕಾಫಿ ತೋಟಗಳಲ್ಲಿ ಕಾಡುಕೋಣಗಳು ನಿರ್ಭೀತಿಯಿಂದ ಸಂಚರಿಸುತ್ತಿವೆ. ತೋಟ ಕಾರ್ಮಿಕರು ಕೂಡ ಕೆಲಸಕ್ಕೆ ಬರಲು ಭಯ ಪಡುವಂತಾಗಿದೆ. ಕಾಡಾನೆ, ಹುಲಿಗಳ ಕಾಟದಿಂದ ಈ ಭಾಗದ ಬಣಕಲ್, ಹೆಗ್ಗುಡ್ಲು, ಭಾರತೀಬೈಲ್ ಸುತ್ತಮುತ್ತ ಜನರು ರೋಸಿ ಹೋಗಿದ್ದಾರೆ . ಈಗ ಕಾಡುಕೋಣಗಳ ಹಾವಳಿಯಿಂದ ತೋಟಗಾರಿಕೆ ಕೃಷಿಗೂ ಹೊಡೆತ ಬಿದ್ದಂತಾಗಿದೆ’ ಎಂದರು. ಬುಧವಾರ ಅರಣ್ಯ ಅಧಿಕಾರಿ ಉಪವಲಯ ಅರಣ್ಯಾಧಿಕಾರಿ ಉಮೇಶ್ ನೇತೃತ್ವದ ತಂಡ ಸ್ಥಳಕ್ಕೆ ಆಗಮಿಸಿ ಅತ್ತಿಗೆರೆ, ದೇವನಗೂಲ್ ಸುತ್ತಮುತ್ತ ಗುಡ್ಡದ ತೋಟಗಳಲ್ಲಿ ಪಟಾಕಿ ಸಿಡಿಸಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿ ಪಟಾಕಿ ಸಿಡಿಸಿ ಕಾಡುಕೋಣಗಳನ್ನು ಕಾಡಿಗೆ ಅಟ್ಟಲು ಕಾರ್ಯಾಚರಣೆ ಆರಂಭಿಸಿದರು. ಉಪ ವಲಯ ಅರಣ್ಯ ಅಧಿಕಾರಿ ಉಮೇಶ್,ಗಸ್ತು ಅರಣ್ಯ ಪಾಲಕರಾದ ಮೋಸಿನ್, ಜಯಪ್ಪ ಅರಣ್ಯ ವೀಕ್ಷಕರಾದ ಕೃಷ್ಣಮೂರ್ತಿ ಗಿರೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು