12:36 PM Thursday31 - July 2025
ಬ್ರೇಕಿಂಗ್ ನ್ಯೂಸ್
ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ… USA | ಡ್ರೈವರ್ ಇಲ್ಲದ ಕಾರಿನಲ್ಲಿ ಪ್ರಯಾಣಿಸಿದ ಸ್ಪೀಕರ್ ಯು.ಟಿ. ಖಾದರ್!: ಇದು… Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಕೊಂಕಣಿ ಸರ್ಟಿಫಿಕೇಟ್ ಕೋರ್ಸ್: ಕೊಂಕಣಿ ಫೋಕ್ ಲೋರ್ ಅಂಡ್ ಡಾನ್ಸ್ ತರಬೇತಿಗೆ ಚಾಲನೆ

03/11/2023, 10:14

ಮಂಗಳೂರು(reporterkarnataka.com): ಕೆನರಾ ಕಾಲೇಜಿನಲ್ಲಿ ಕೊಂಕಣಿ ಭಾಷಾ ವಿದ್ಯಾರ್ಥಿ ಮಂಡಲ ಕೆನರಾ ಕಾಲೇಜು ಹಾಗೂ ಕೊಂಕಣಿ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕೊಂಕಣಿ ಸ್ನಾತಕೋತ್ತರ ವಿಭಾಗ ಮಂಗಳೂರು ವಿಶ್ವವಿದ್ಯಾಲಯ ಇವುಗಳ ಜಂಟಿ
ಆಶ್ರಯದಲ್ಲಿ ಕೊಂಕಣಿ ಸರ್ಟಿಫಿಕೇಟ್ ಕೋರ್ಸ್, ಕೊಂಕಣಿ ಫೋಕ್ ಲೋರ್ ಅಂಡ್ ಡಾನ್ಸ್ ತರಬೇತಿಗೆ ಡಾ. ದೇವದಾಸ್ ಪೈ ಅವರು ದೀಪ ಬೆಳಗಿಸುವ ಮೂಲಕ ಚಾಲನೆಯನ್ನಿತ್ತರು.
“ಮೂಲತ: ಉತ್ತರ ಭಾರತದ ಸರಸ್ವತಿ ನದಿ ತೀರದವರಾದ ಗೌಡ ಸಾರಸ್ವತ ಬ್ರಾಹ್ಮಣರು ಗೋವಾದಲ್ಲಿ ನೆಲೆ ನಿಂತು ತಮ್ಮ ಸಂಸ್ಕೃತಿ ಆಚಾರ ವಿಚಾರಗಳನ್ನೆಲ್ಲ ಉಳಿಸಿ ಬೆಳೆಸಿಕೊಂಡು ಬರುತ್ತಿದ್ದ ಸಂದರ್ಭದಲ್ಲಿ ವ್ಯಾಪಾರದ ನೆಪವಿಟ್ಟುಕೊಂಡು ಭಾರತಕ್ಕೆ ಆಗಮಿಸಿದ ಪೋರ್ಚುಗೀಸರ ಆಕ್ರಮಣವನ್ನು ತಾಳಲಾರದೆ ಹೆದರಿ ತಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳ ಬೇಕೆಂಬ ಮಹಾದಾಸೆಯಿಂದ ದಕ್ಷಿಣದ ಕರಾವಳಿ ಪ್ರದೇಶದಲ್ಲಿ ನೆಲೆ ನಿಂತರು. ಇಂದಿಗೂ ಇವರು ತಮ್ಮಆಚಾರ ವಿಚಾರ ಸಂಪ್ರದಾಯಗಳನ್ನು ಉಳಿಸಿ ಬೆಳೆಸಿಕೊಂಡು ಬರುತ್ತಿರುವುದು ಗಮನಾರ್ಹ “ಎಂದು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೇಮಲತಾ ವಿ. ಅವರು ಕೊಂಕಣಿ ಭಾಷೆಯಲ್ಲಿ ಎಂ.ಎ, ಪಿ ಎಚ್ ಡಿ ಪದವಿಯನ್ನು ಮಾಡಿದಲ್ಲಿ ವಿಪುಲ ವೃತ್ತಿಪರ ಅವಕಾಶಗಳು ಇರುವುದು. ಅದಕ್ಕೆ ಇಂತಹ ಸರ್ಟಿಫಿಕೇಟ್ ಕೋರ್ಸ್ ಸ್ಪೂರ್ತಿದಾಯಕವಾಗುವುದು ಎಂದು ನುಡಿದರು.
ಶ್ವೇತಾ ಕಾಮತ್ ಪ್ರಾರ್ಥಿಸಿದರು. ಕೊಂಕಣಿ ಭಾಷಾ ವಿದ್ಯಾರ್ಥಿ ಮಂಡಲ ಹಾಗೂ ಕೊಂಕಣಿ ಕೋರ್ಸ್ ಸಂಯೋಜಕಿಯಾದ ಸುಜಾತಾ ಜಿ.ನಾಯಕ್ ಸ್ವಾಗತಿಸಿದರು. ಸಹ ಸಂಯೋಜಕಿ ಕೀರ್ತನಾ ಎಂ. ಭಟ್ ಅವರು ವಂದಿಸಿದರು. ವರದರಾಜ ಭಕ್ತ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು