6:49 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಲಾರಿ ಮಾಲಕರ ಸಂಕಷ್ಟಕ್ಕೆ ಸರಕಾರ ಸ್ಪಂದಿಸಬೇಕಿದೆ : ಶಾಸಕ ಡಾ. ವೈ. ಭರತ್ ಶೆಟ್ಟಿ

03/11/2023, 19:24

ಮಂಗಳೂರು(reporterkarnataka.com): ಉದ್ಯಮ ವಲಯ ಚೇತರಿಸುತ್ತಿದ್ದರೂ ಲಾರಿ ಮಾಲಕರು ಇನ್ನೂ ಸಂಕಷ್ಟದಲ್ಲಿಯೇ ಇರುವುದು ವಿಪರ್ಯಾಸ. ಲಾರಿ ವ್ಯವಹಾರ ನಷ್ಟದಲ್ಲಿಯೇ ಮುಂದುವರಿಯಬಾರದು. ಸರಕಾರ ಲಾರಿ ಮಾಲಕರ ಸಂಕಷ್ಟಗಳಿಗೆ ಸ್ಪಂದಿಸಬೇಕಿದೆ ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ಹೇಳಿದರು.
ಅವರು ಕುಳಾಯಿಯಲ್ಲಿ ದಕ್ಷಿಣ ಕನ್ನಡ ಟ್ರಕ್ ಓನರ್ಸ್ ಅಸೋಸಿಯೇಷನ್ (ರಿ.) ಇದರ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದರು.

ಜಿಂದಾಲ್ ಮಂಗಳೂರು ಕಲ್ಲಿದ್ದಲು ಘಟಕ ಮುಖ್ಯಸ್ಥ ಎಲ್. ರಾಮನಾಥನ್,ಸಂಘದ ಅಧ್ಯಕ್ಷ ಸುಶಾಂತ್ ಶೆಟ್ಟಿ , ಪಣಂಬೂರು ಉಪ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ನಾಯ್ಕ್, ಸಾರಿಗೆ ಉದ್ಯಮಿ ನಿತ್ಯಾನಂದ ಶೆಟ್ಟಿ, ಉದ್ಯಮಿ ಹಾಗೂ ಸಂಘದ ಗೌರವಾಧ್ಯಕ್ಷ ಸುಜಿತ್ ಆಳ್ವ, ಸಂಘದ ಸಲಹೆಗಾರ ಬಿ.ಎಸ್. ಚಂದ್ರು ಮಾತನಾಡಿ ಶುಭ ಹಾರೈಸಿದರು.
ಪ್ರಧಾನ ಕಾರ್ಯದರ್ಶಿ ಸುನಿಲ್ ಡಿಸೋಜಾ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಹಾರಿಸ್ ಹೊಸ್ಮಾರ್ ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು