2:39 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಜನ್ಮದಿನದ ಅಂಗವಾಗಿ ‘ರಾಷ್ಟ್ರೀಯ ಏಕತಾ ದಿನ’ ಆಚರಣೆ

03/11/2023, 22:39

ಮಂಗಳೂರು(reporterkarnataka.com): ಕೆನರಾ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಭಾರತ ರತ್ನ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ‘ರಾಷ್ಟ್ರೀಯ ಏಕತಾ ದಿನ’ವನ್ನು ಆಚರಿಸಲಾಯಿತು.


18 ಕರ್ನಾಟಕ ಬೆಟಾಲಿಯನ್ ಎನ್‌.ಸಿ.ಸಿ ಇದರ ಆಡಳಿತಾಧಿಕಾರಿ ಲೆ. ಕರ್ನಲ್ ಗ್ರೇಷಿಯನ್ ಸಿಕ್ವೇರಾ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದು,ಭಾರತವು ಅಖಂಡವಾಗಿ ತಲೆಯೆತ್ತಿ ನಿಲ್ಲಲು ಕಾರಣರಾದವರು ಸರ್ದಾರ್ ವಲ್ಲಭಾಯಿ ಪಟೇಲರು. ನಮ್ಮ ದೇಹದ ಪ್ರತಿಯೊಂದು ಅಂಗಗಳು ಸರಿಯಾಗಿ ಕೆಲಸ ಮಾಡುವಂತೆ ಜಾತಿ ಮತ ಧರ್ಮ ಕಾಗಿ ಹೋರಾಡದೆ ದೇಶದ ಒಳಿತಿಗಾಗಿ ಒಂದಾಗಿ ಹೋರಾಡಬೇಕು ಎಂದರು. ಧರ್ಮವು ಪ್ರತಿಯೊಬ್ಬರೂ ಒಳ್ಳೆಯ ಮನುಷ್ಯನಾಗಲು ಹೇಳಿಕೊಡುತ್ತದೆ. ನನಗೆ ಇಂದು ಸಿಗುತ್ತಿರುವ ಗೌರವ ನನ್ನ ಸಮವಸ್ತ್ರದಿಂದ. ಇದು ಭಾರತ ದೇಶ ಕೊಟ್ಟಿರುವ ಸಮವಸ್ತ್ರ. ಈ ರಾಷ್ಟ್ರದ ಏಕತೆ, ಸೌಹಾರ್ದತೆ, ಸುರಕ್ಷೆ ನಮ್ಮ ಕೈಯಲ್ಲಿದೆ ಎಂದು ಅವರು ನುಡಿದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅಧ್ಯಕ್ಷತೆ ವಹಿಸಿದ್ದು ಉಕ್ಕಿನ ಮನುಷ್ಯ ಪಟೇಲರ ಕೊಡುಗೆಯನ್ನು ಸ್ಮರಿಸಿ ವಿದ್ಯಾರ್ಥಿಗಳಿಗೆ ಏಕತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾಲೇಜಿನ ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್ ಉಪಸ್ಥಿತರಿದ್ದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ಅನಸೂಯ ಭಾಗವತ್ ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿದರು. ಇನ್ನೋರ್ವ ಸಂಯೋಜಕಿ ಪ್ರತಿಮಾ ಬಾಳಿಗ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಉಷಾ ನಾಯಕ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು