9:33 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಜನ್ಮದಿನದ ಅಂಗವಾಗಿ ‘ರಾಷ್ಟ್ರೀಯ ಏಕತಾ ದಿನ’ ಆಚರಣೆ

03/11/2023, 22:39

ಮಂಗಳೂರು(reporterkarnataka.com): ಕೆನರಾ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಭಾರತ ರತ್ನ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ‘ರಾಷ್ಟ್ರೀಯ ಏಕತಾ ದಿನ’ವನ್ನು ಆಚರಿಸಲಾಯಿತು.


18 ಕರ್ನಾಟಕ ಬೆಟಾಲಿಯನ್ ಎನ್‌.ಸಿ.ಸಿ ಇದರ ಆಡಳಿತಾಧಿಕಾರಿ ಲೆ. ಕರ್ನಲ್ ಗ್ರೇಷಿಯನ್ ಸಿಕ್ವೇರಾ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದು,ಭಾರತವು ಅಖಂಡವಾಗಿ ತಲೆಯೆತ್ತಿ ನಿಲ್ಲಲು ಕಾರಣರಾದವರು ಸರ್ದಾರ್ ವಲ್ಲಭಾಯಿ ಪಟೇಲರು. ನಮ್ಮ ದೇಹದ ಪ್ರತಿಯೊಂದು ಅಂಗಗಳು ಸರಿಯಾಗಿ ಕೆಲಸ ಮಾಡುವಂತೆ ಜಾತಿ ಮತ ಧರ್ಮ ಕಾಗಿ ಹೋರಾಡದೆ ದೇಶದ ಒಳಿತಿಗಾಗಿ ಒಂದಾಗಿ ಹೋರಾಡಬೇಕು ಎಂದರು. ಧರ್ಮವು ಪ್ರತಿಯೊಬ್ಬರೂ ಒಳ್ಳೆಯ ಮನುಷ್ಯನಾಗಲು ಹೇಳಿಕೊಡುತ್ತದೆ. ನನಗೆ ಇಂದು ಸಿಗುತ್ತಿರುವ ಗೌರವ ನನ್ನ ಸಮವಸ್ತ್ರದಿಂದ. ಇದು ಭಾರತ ದೇಶ ಕೊಟ್ಟಿರುವ ಸಮವಸ್ತ್ರ. ಈ ರಾಷ್ಟ್ರದ ಏಕತೆ, ಸೌಹಾರ್ದತೆ, ಸುರಕ್ಷೆ ನಮ್ಮ ಕೈಯಲ್ಲಿದೆ ಎಂದು ಅವರು ನುಡಿದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅಧ್ಯಕ್ಷತೆ ವಹಿಸಿದ್ದು ಉಕ್ಕಿನ ಮನುಷ್ಯ ಪಟೇಲರ ಕೊಡುಗೆಯನ್ನು ಸ್ಮರಿಸಿ ವಿದ್ಯಾರ್ಥಿಗಳಿಗೆ ಏಕತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾಲೇಜಿನ ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್ ಉಪಸ್ಥಿತರಿದ್ದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ಅನಸೂಯ ಭಾಗವತ್ ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿದರು. ಇನ್ನೋರ್ವ ಸಂಯೋಜಕಿ ಪ್ರತಿಮಾ ಬಾಳಿಗ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಉಷಾ ನಾಯಕ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು