8:01 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಜನ್ಮದಿನದ ಅಂಗವಾಗಿ ‘ರಾಷ್ಟ್ರೀಯ ಏಕತಾ ದಿನ’ ಆಚರಣೆ

03/11/2023, 22:39

ಮಂಗಳೂರು(reporterkarnataka.com): ಕೆನರಾ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಭಾರತ ರತ್ನ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ‘ರಾಷ್ಟ್ರೀಯ ಏಕತಾ ದಿನ’ವನ್ನು ಆಚರಿಸಲಾಯಿತು.


18 ಕರ್ನಾಟಕ ಬೆಟಾಲಿಯನ್ ಎನ್‌.ಸಿ.ಸಿ ಇದರ ಆಡಳಿತಾಧಿಕಾರಿ ಲೆ. ಕರ್ನಲ್ ಗ್ರೇಷಿಯನ್ ಸಿಕ್ವೇರಾ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದು,ಭಾರತವು ಅಖಂಡವಾಗಿ ತಲೆಯೆತ್ತಿ ನಿಲ್ಲಲು ಕಾರಣರಾದವರು ಸರ್ದಾರ್ ವಲ್ಲಭಾಯಿ ಪಟೇಲರು. ನಮ್ಮ ದೇಹದ ಪ್ರತಿಯೊಂದು ಅಂಗಗಳು ಸರಿಯಾಗಿ ಕೆಲಸ ಮಾಡುವಂತೆ ಜಾತಿ ಮತ ಧರ್ಮ ಕಾಗಿ ಹೋರಾಡದೆ ದೇಶದ ಒಳಿತಿಗಾಗಿ ಒಂದಾಗಿ ಹೋರಾಡಬೇಕು ಎಂದರು. ಧರ್ಮವು ಪ್ರತಿಯೊಬ್ಬರೂ ಒಳ್ಳೆಯ ಮನುಷ್ಯನಾಗಲು ಹೇಳಿಕೊಡುತ್ತದೆ. ನನಗೆ ಇಂದು ಸಿಗುತ್ತಿರುವ ಗೌರವ ನನ್ನ ಸಮವಸ್ತ್ರದಿಂದ. ಇದು ಭಾರತ ದೇಶ ಕೊಟ್ಟಿರುವ ಸಮವಸ್ತ್ರ. ಈ ರಾಷ್ಟ್ರದ ಏಕತೆ, ಸೌಹಾರ್ದತೆ, ಸುರಕ್ಷೆ ನಮ್ಮ ಕೈಯಲ್ಲಿದೆ ಎಂದು ಅವರು ನುಡಿದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅಧ್ಯಕ್ಷತೆ ವಹಿಸಿದ್ದು ಉಕ್ಕಿನ ಮನುಷ್ಯ ಪಟೇಲರ ಕೊಡುಗೆಯನ್ನು ಸ್ಮರಿಸಿ ವಿದ್ಯಾರ್ಥಿಗಳಿಗೆ ಏಕತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾಲೇಜಿನ ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್ ಉಪಸ್ಥಿತರಿದ್ದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ಅನಸೂಯ ಭಾಗವತ್ ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿದರು. ಇನ್ನೋರ್ವ ಸಂಯೋಜಕಿ ಪ್ರತಿಮಾ ಬಾಳಿಗ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಉಷಾ ನಾಯಕ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು