9:31 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಭ್ರಷ್ಟಾಚಾರ ಪ್ರತಿಭಾವಂತ ವಿದ್ಯಾರ್ಥಿಗಳ ವಿಕಸನಕ್ಕೆ ಮಾರಕ: ಲೋಕಾಯುಕ್ತ ಎಸ್ಪಿ ಸೈಮನ್

04/11/2023, 11:36

ಮಂಗಳೂರು(reporterkarnataka.com): ಭ್ರಷ್ಟಾಚಾರ ಜಾಗೃತಿ ವಾರಾಚರಣೆ ಇದರ ಅಂಗವಾಗಿ ಕೆನರಾ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ‘ಭ್ರಷ್ಟಾಚಾರಕ್ಕೆ ವಿರೋಧ, ರಾಷ್ಟ್ರಕ್ಕೆ ಸಮರ್ಪಣೆ ‘ ಎಂಬ ವಿಚಾರದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಮಂಗಳೂರು ಲೋಕಾಯುಕ್ತ ವಿಭಾಗದ ಲೋಕಾಯುಕ್ತ ಎಸ್. ಪಿ, ಸಿ. ಎ. ಸೈಮನ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದು ಮಾತನಾಡಿದರು. ಲಂಚವನ್ನು ಹಣದ ರೂಪದಲ್ಲಿ ತೆಗೆದುಕೊಳ್ಳುವುದು ಅಥವಾ ಬೇರೆ ಯಾವುದಾದರೂ ರೀತಿಯಲ್ಲಿ ಲಾಭ ಪಡೆದುಕೊಳ್ಳುವುದು ಕೂಡ ಭ್ರಷ್ಟಾಚಾರವೇ ಆಗಿದೆ. ಅದನ್ನು ಆಳವಾಗಿ ಬೇರೂರಲು ಬಿಟ್ಟರೆ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ. ಭ್ರಷ್ಟಾಚಾರವು ಪ್ರತಿಭಾವಂತ ವಿದ್ಯಾರ್ಥಿಗಳ ವಿಕಸನಕ್ಕೆ ಮಾರಕವಾಗಿದೆ. ಲೋಕಾಯುಕ್ತ ಆಕ್ಟ್ ಮತ್ತು ಆರ್‌.ಟಿ.ಐ ಆಕ್ಟ್ ಭ್ರಷ್ಟಾಚಾರದ ವಿರುದ್ಧ ಹೋರಾಟದಲ್ಲಿ ಸರಕಾರದ ಬಲವನ್ನು ಗಟ್ಟಿಗೊಳಿಸುವ ಅಸ್ತ್ರವಾಗಿದೆ. ನಮ್ಮ ಮೌನ ನಮ್ಮ ಹಕ್ಕುಗಳನ್ನು ದಮನಿಸುತ್ತದೆ. ದೇಶ ಕಟ್ಟಲು ನಮ್ಮ ಕೊಡುಗೆ ಬಹಳ ಅಗತ್ಯ ಎಂದು ಅವರು ನುಡಿದರು.
ಕಾಲೇಜು ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್ ಉಪಸ್ಥಿತರಿದ್ದರು. ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು ನಾಗರಿಕರಿಗೆ ಪ್ರತಿಜ್ಞಾವಿಧಿ ಭೋದಿಸಿದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕರಾದ ಪ್ರತಿಮಾ ವಿ. ಬಾಳಿಗ ಸ್ವಾಗತಿಸಿದರು. ಅನುಸೂಯ ವಂದಿಸಿದರು. ಮಧುಶ್ರೀ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು