1:18 PM Friday1 - May 2026
ಬ್ರೇಕಿಂಗ್ ನ್ಯೂಸ್
ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು…

ಇತ್ತೀಚಿನ ಸುದ್ದಿ

ಭ್ರಷ್ಟಾಚಾರ ಪ್ರತಿಭಾವಂತ ವಿದ್ಯಾರ್ಥಿಗಳ ವಿಕಸನಕ್ಕೆ ಮಾರಕ: ಲೋಕಾಯುಕ್ತ ಎಸ್ಪಿ ಸೈಮನ್

04/11/2023, 11:36

ಮಂಗಳೂರು(reporterkarnataka.com): ಭ್ರಷ್ಟಾಚಾರ ಜಾಗೃತಿ ವಾರಾಚರಣೆ ಇದರ ಅಂಗವಾಗಿ ಕೆನರಾ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ‘ಭ್ರಷ್ಟಾಚಾರಕ್ಕೆ ವಿರೋಧ, ರಾಷ್ಟ್ರಕ್ಕೆ ಸಮರ್ಪಣೆ ‘ ಎಂಬ ವಿಚಾರದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಮಂಗಳೂರು ಲೋಕಾಯುಕ್ತ ವಿಭಾಗದ ಲೋಕಾಯುಕ್ತ ಎಸ್. ಪಿ, ಸಿ. ಎ. ಸೈಮನ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದು ಮಾತನಾಡಿದರು. ಲಂಚವನ್ನು ಹಣದ ರೂಪದಲ್ಲಿ ತೆಗೆದುಕೊಳ್ಳುವುದು ಅಥವಾ ಬೇರೆ ಯಾವುದಾದರೂ ರೀತಿಯಲ್ಲಿ ಲಾಭ ಪಡೆದುಕೊಳ್ಳುವುದು ಕೂಡ ಭ್ರಷ್ಟಾಚಾರವೇ ಆಗಿದೆ. ಅದನ್ನು ಆಳವಾಗಿ ಬೇರೂರಲು ಬಿಟ್ಟರೆ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ. ಭ್ರಷ್ಟಾಚಾರವು ಪ್ರತಿಭಾವಂತ ವಿದ್ಯಾರ್ಥಿಗಳ ವಿಕಸನಕ್ಕೆ ಮಾರಕವಾಗಿದೆ. ಲೋಕಾಯುಕ್ತ ಆಕ್ಟ್ ಮತ್ತು ಆರ್‌.ಟಿ.ಐ ಆಕ್ಟ್ ಭ್ರಷ್ಟಾಚಾರದ ವಿರುದ್ಧ ಹೋರಾಟದಲ್ಲಿ ಸರಕಾರದ ಬಲವನ್ನು ಗಟ್ಟಿಗೊಳಿಸುವ ಅಸ್ತ್ರವಾಗಿದೆ. ನಮ್ಮ ಮೌನ ನಮ್ಮ ಹಕ್ಕುಗಳನ್ನು ದಮನಿಸುತ್ತದೆ. ದೇಶ ಕಟ್ಟಲು ನಮ್ಮ ಕೊಡುಗೆ ಬಹಳ ಅಗತ್ಯ ಎಂದು ಅವರು ನುಡಿದರು.
ಕಾಲೇಜು ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್ ಉಪಸ್ಥಿತರಿದ್ದರು. ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು ನಾಗರಿಕರಿಗೆ ಪ್ರತಿಜ್ಞಾವಿಧಿ ಭೋದಿಸಿದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕರಾದ ಪ್ರತಿಮಾ ವಿ. ಬಾಳಿಗ ಸ್ವಾಗತಿಸಿದರು. ಅನುಸೂಯ ವಂದಿಸಿದರು. ಮಧುಶ್ರೀ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು