10:30 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಭ್ರಷ್ಟಾಚಾರ ಪ್ರತಿಭಾವಂತ ವಿದ್ಯಾರ್ಥಿಗಳ ವಿಕಸನಕ್ಕೆ ಮಾರಕ: ಲೋಕಾಯುಕ್ತ ಎಸ್ಪಿ ಸೈಮನ್

04/11/2023, 11:36

ಮಂಗಳೂರು(reporterkarnataka.com): ಭ್ರಷ್ಟಾಚಾರ ಜಾಗೃತಿ ವಾರಾಚರಣೆ ಇದರ ಅಂಗವಾಗಿ ಕೆನರಾ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ‘ಭ್ರಷ್ಟಾಚಾರಕ್ಕೆ ವಿರೋಧ, ರಾಷ್ಟ್ರಕ್ಕೆ ಸಮರ್ಪಣೆ ‘ ಎಂಬ ವಿಚಾರದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಮಂಗಳೂರು ಲೋಕಾಯುಕ್ತ ವಿಭಾಗದ ಲೋಕಾಯುಕ್ತ ಎಸ್. ಪಿ, ಸಿ. ಎ. ಸೈಮನ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದು ಮಾತನಾಡಿದರು. ಲಂಚವನ್ನು ಹಣದ ರೂಪದಲ್ಲಿ ತೆಗೆದುಕೊಳ್ಳುವುದು ಅಥವಾ ಬೇರೆ ಯಾವುದಾದರೂ ರೀತಿಯಲ್ಲಿ ಲಾಭ ಪಡೆದುಕೊಳ್ಳುವುದು ಕೂಡ ಭ್ರಷ್ಟಾಚಾರವೇ ಆಗಿದೆ. ಅದನ್ನು ಆಳವಾಗಿ ಬೇರೂರಲು ಬಿಟ್ಟರೆ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ. ಭ್ರಷ್ಟಾಚಾರವು ಪ್ರತಿಭಾವಂತ ವಿದ್ಯಾರ್ಥಿಗಳ ವಿಕಸನಕ್ಕೆ ಮಾರಕವಾಗಿದೆ. ಲೋಕಾಯುಕ್ತ ಆಕ್ಟ್ ಮತ್ತು ಆರ್‌.ಟಿ.ಐ ಆಕ್ಟ್ ಭ್ರಷ್ಟಾಚಾರದ ವಿರುದ್ಧ ಹೋರಾಟದಲ್ಲಿ ಸರಕಾರದ ಬಲವನ್ನು ಗಟ್ಟಿಗೊಳಿಸುವ ಅಸ್ತ್ರವಾಗಿದೆ. ನಮ್ಮ ಮೌನ ನಮ್ಮ ಹಕ್ಕುಗಳನ್ನು ದಮನಿಸುತ್ತದೆ. ದೇಶ ಕಟ್ಟಲು ನಮ್ಮ ಕೊಡುಗೆ ಬಹಳ ಅಗತ್ಯ ಎಂದು ಅವರು ನುಡಿದರು.
ಕಾಲೇಜು ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್ ಉಪಸ್ಥಿತರಿದ್ದರು. ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು ನಾಗರಿಕರಿಗೆ ಪ್ರತಿಜ್ಞಾವಿಧಿ ಭೋದಿಸಿದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕರಾದ ಪ್ರತಿಮಾ ವಿ. ಬಾಳಿಗ ಸ್ವಾಗತಿಸಿದರು. ಅನುಸೂಯ ವಂದಿಸಿದರು. ಮಧುಶ್ರೀ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು