2:58 PM Wednesday8 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

ಇತ್ತೀಚಿನ ಸುದ್ದಿ

ಡಿ. 23ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

05/11/2023, 11:56

ರಾಯಚೂರ(reporterkarnataka.com) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿವತಿಯಿಂದ ರಾಜ್ಯಮಟ್ಟದ ಪತ್ರಕರ್ತರ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಉತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ
ಡಿಸೆಂಬರ್ 23ರಂದು ನಡೆಯಲಿದೆ‌.

ಕಾರ್ಯನಿರತ ಪತ್ರಕರ್ತರ ಧ್ವನಿ ಮಸ್ಕಿ ತಾಲೂಕು ಘಟಕ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತರಾದ ವಿರೂಪಾಕ್ಷಯ್ಯ ಸ್ವಾಮಿ ಸಾಲೆಮಠ ಅಂತರಗಂಗೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಪತ್ರಕರ್ತರ ಧ್ವನಿ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಎಲ್ಲ ಕಾರ್ಯಕ್ರಮಗಳು ನಡೆಯಲಿದೆ. ರಾಜ್ಯಮಟ್ಟದ ಪತ್ರಕರ್ತರ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಉತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಡಿ. 23ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದೆ. ರಾಜ್ಯ ಅಧ್ಯಕ್ಷರ ಆದೇಶದಂತೆ ನಮ್ಮ ಸಂಘಟನೆಯ ಪತ್ರಕರ್ತರ ಮಿತ್ರರ ಮಕ್ಕಳಿಗೆ ಕೂಡ ಪ್ರಶಸ್ತಿ ನೀಡಲಾಗುತ್ತದೆ. ನಮ್ಮ ಸದಸ್ಯರು ತಮ್ಮ ಮಕ್ಕಳು ಅತಿ ಹೆಚ್ಚು ಅಂಕಗಳನ್ನು ಪಡೆದ ಮಾಹಿತಿಯನ್ನು ನೀಡಿ ಪ್ರಶಸ್ತಿ ಪಡೆಯಲು ಅರ್ಹತೆ ಹೊಂದಿದ್ದಾರೆ. 10 ನೇ ತರಗತಿ, ಪಿಯುಸಿ , ಡಿಗ್ರಿ, ಡಿಪ್ಲೊಮಾ ಹೀಗೆ ಇನ್ನಿತರ ವಿಧ್ಯಾರ್ಥಿಗಳು ಇದ್ದ ಪಾಲಕರು ಆಯಾ ತಾಲೂಕಿನ ಅಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷ ಅವರನ್ನು ಸಂಪರ್ಕ ಮಾಡಬೇಕು. ಪ್ರತಿಶತ ಶೇಕಡಾ 80 ಅಂಕಗಳನ್ನು ಪಡೆದ ಮಕ್ಕಳು ಈ ಪ್ರಶಸ್ತಿಯನ್ನು ಪಡೆಯಲು ಅರ್ಹರು. ಆಸಕ್ತಿಯಿಂದ ಹೆಸರು ನೊಂದಾಯಿಸಬಹುದು ಸಂಪರ್ಕಿಸಿ ಆಯಾ ತಾಲೂಕು ಅಧ್ಯಕ್ಷರು ಜಿಲ್ಲಾಧ್ಯಕ್ಷರು ಹೆಸರು ನೋಂದಾಯಿಸಬಹುದು. ಈ ನಂಬರಿಗೆ ಕರೆ ಮಾಡಿ. 98801744902 ಸಂಪರ್ಕಿಸಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ನಾಡಿನ ಸಾಹಿತಿಗಳು, ಚಿಂತಕರು, ಚಲನಚಿತ್ರ ನಟರು ಹಾಗೂ ಜನಪ್ರತಿನಿಧಿಗಳು, ಮಾಧ್ಯಮ ಸಲಹೆಗಾರರು ನಾಡಿನ ಪತ್ರಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು