4:07 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ದತ್ತ ಮಾಲಾ ಅಭಿಯಾನ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್; 2 ಸಾವಿರ ಪೊಲೀಸರ ನಿಯೋಜನೆ; ಡ್ರೋಣ್ ಕ್ಯಾಮೆರಾ ಕಣ್ಗಾವಲು

05/11/2023, 19:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ‌ ದರ್ಗಾದಲ್ಲಿ ದತ್ತಮಾಲಾ‌ ಅಭಿಯಾನ‌ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ‌ ಬಂದೋಬಸ್ತ್ ಮಾಡಲಾಗಿದೆ.
ಇನಾಂ ದತ್ತಾತ್ರೇಯ ಸ್ವಾಮಿ ದರ್ಗಾ‌ಸೇರಿದಂತೆ ಜಿಲ್ಲೆಯಾದ್ಯಂತ 2000ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ. ಜಿಲ್ಲೆಯ ಗಡಿಭಾಗ ಸೇರಿದಂತೆ 26 ಚೆಕ್‌ಪೋಸ್ಟ್, 49 ಸೆಕ್ಟರ್ ಆಫೀಸರ್ ನೇಮಕ ಮಾಡಲಾಗಿದೆ. ಸೂಕ್ಷ್ಮ‌, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ, ಡ್ರೋಣ್ ಕ್ಯಾಮೆರಾ ಕಣ್ಗಾವಲು ಇರಿಸಲಾಗಿದೆ.
ಪೊಲೀಸರಿಂದ ಮುಂಜಾಗ್ರತಾ ಕ್ರಮವಾಗಿ‌ ಚಿಕ್ಕಮಗಳೂರು ಎಸ್ಪಿ ಡಾ. ವಿಕ್ರಮ್ ಅಮಟೆ ನೇತೃತ್ವದಲ್ಲಿ ರೂಟ್ ಮಾರ್ಚ್ ಮಾಡಲಾಗಿದೆ.


ಎಂ.ಜಿ. ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರಿಂದ ರೂಟ್ ಮಾರ್ಚ್ ನಡೆಯಿತು.
ಶ್ರೀ ರಾಮಸೇನೆಯಿಂದ ದತ್ತಪೀಠ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ದತ್ತಮಾಲಾ ಅಭಿಯಾನ ನಡೆಯುತ್ತಿದೆ. ವಿವಾದಿತ ಸ್ಥಳದಲ್ಲಿರುವ ಗೋರಿಗಳ ಸ್ಥಳಾಂತರಕ್ಕೆ ಶ್ರೀರಾಮಸೇನೆ
ಪಟ್ಟು ಹಿಡಿದಿದೆ. ನಾಳೆ ದತ್ತ ಪಾದುಕೆ ದರ್ಶನ, ಹೋಮ ಪೂಜೆ ನಡೆಯಲಿದೆ. ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಪೂಜಾ ಕಾರ್ಯ ನಡೆಯಲಿದೆ.
ನಾಳೆ ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ.
ದತ್ತಮಾಲಾ ಅಭಿಯಾನದಲ್ಲಿ 5000ಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ರಾಜ್ಯಾದ್ಯಂತ ದತ್ತಮಾಲಾ ಧರಿಸಿ ದತ್ತ ಪಾದುಕೆ ದರ್ಶನ ಶ್ರೀ ರಾಮ ಸೇನೆ ಕಾರ್ಯಕರ್ತರು ಪಡೆಯಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು