9:36 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಗ್ಯಾರಂಟಿ ಯೋಜನೆ ಜಾರಿ ಬಳಿಕದ ಆರ್ಥಿಕ ಸ್ಥಿತಿ ಬಗ್ಗೆ ರಾಜ್ಯ ಸರಕಾರ ಶ್ವೇತಪತ್ರ ಹೊರಡಿಸಲಿ: ಶಾಸಕ ಡಾ.ಭರತ್ ಶೆಟ್ಟಿ ಆಗ್ರಹ

05/11/2023, 20:02

ಕಾವೂರು(reporterkarnataka.com): ರಾಜ್ಯದ ಹಣಕಾಸಿನ ವಿಚಾರವಾಗಿ ಸಾರ್ವಜನಿಕರಲ್ಲಿ ಗೊಂದಲ ಅನುಮಾನ, ಗೊಂದಲ ಮೂಡುವಂತಾಗಿದ್ದು,
ಸರಕಾರ ಗ್ಯಾರಂಟಿ ಯೋಜನೆಗಳ ಬಳಿಕ ಆರ್ಥಿಕ ಸ್ಥಿತಿಗತಿ ಹೇಗಿದೆ ಎಂಬುದಕ್ಕೆ ರಾಜ್ಯ ಸರಕಾರ ಶ್ವೇತಪತ್ರವನ್ನು ಹೊರಡಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.
ವಿವಿಧ ಇಲಾಖೆಗಳಲ್ಲಿ ದುಡಿಯುತ್ತಿರುವ ನೌಕರರಿಗೆ ವೇತನ ಪಾವತಿ ವಿಳಂಬವಾಗುತ್ತಿದೆ.ಸರಕಾರಿ ಶಾಲೆಗಳಲ್ಲಿ ಬಿಸಿ ಊಟ ಸೇರಿದಂತೆ ಪೂರಕ ಸೌಲಭ್ಯಗಳಿಗೆ ಹಣಕಾಸಿನ ಕೊರತೆ ಎದುರಾಗಿದ್ದು ಶಿಕ್ಷಕರೇ ಕೈಯಿಂದ ಭರಿಸಿ ಕೆಲಸ ಮಾಡಬೇಕಾದ ಅನಿವಾರ್ಯ ಸ್ಥಿತಿ ಉಂಟಾಗಿದೆ. ಕೆಟ್ಟು ಹೋದ ಸರಕಾರಿ ಬಸ್ಸುಗಳನ್ನು ದುರಸ್ತಿ ಮಾಡಲು ಕೂಡ ಹಿಂದುಮುಂದೆ ನೋಡುವಂತಾಗಿದೆ ಎಂದಿದ್ದಾರೆ.
ಗೃಹಲಕ್ಷ್ಮಿ ಭಾಗ್ಯದ 2000 ಹಣವನ್ನ ಖಾತೆಗೆ ಹಾಕಲು ತಾಂತ್ರಿಕ ತೊಂದರೆಯ ಕುಂಟು ನೆಪ ಹೇಳಲಾಗುತ್ತಿದೆ. ಶಾಸಕರುಗಳು ತಮ್ಮ ಕ್ಷೇತ್ರದಲ್ಲಿ ಹೊಸ ಯೋಜನೆ ಘೋಷಣೆ ಮಾಡಲೂ ಹಿಂದೇಟು ಹಾಕುವಂತಾಗಿದೆ. ಅನುದಾನವೂ ಸಿಗದಂತಾಗಿದೆ.
ಈ ಎಲ್ಲಾ ವಿಚಾರಗಳಲ್ಲಿ ಸಾಕಷ್ಟು ಗೊಂದಲ ಉಂಟು ಮಾಡುತ್ತಿದ್ದು ಸರಕಾರ ಶ್ವೇತ ಪತ್ರದ ಮೂಲಕ ಆರ್ಥಿಕ ಸ್ಥಿತಿ ಗತಿಯ ಕುರಿತು ಸಾರ್ವಜನಿಕರಿಗೆ ವಿಶ್ವಾಸವನ್ನು ಮೂಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಮರಳು ಸಮಸ್ಯೆ ಬಿಗಡಾಯಿಸಿದ್ದು, ಸರಕಾರದ ಅನುದಾನ ಪಡೆದು ಮನೆ ಕಟ್ಟಿಕೊಳ್ಳುವ ಬಡ ವರ್ಗಕ್ಕೆ ಮರಳು ಸಿಗದೆ ಮನೆ ಕಟ್ಟಲು ಆಗುತ್ತಿಲ್ಲ. ಸರಕಾರ ಮರಳು ಪೂರೈಕೆಗೆ ಬೇಕಾದ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು