4:39 PM Wednesday8 - July 2026
ಬ್ರೇಕಿಂಗ್ ನ್ಯೂಸ್
ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ…

ಇತ್ತೀಚಿನ ಸುದ್ದಿ

ಗ್ಯಾರಂಟಿ ಯೋಜನೆ ಜಾರಿ ಬಳಿಕದ ಆರ್ಥಿಕ ಸ್ಥಿತಿ ಬಗ್ಗೆ ರಾಜ್ಯ ಸರಕಾರ ಶ್ವೇತಪತ್ರ ಹೊರಡಿಸಲಿ: ಶಾಸಕ ಡಾ.ಭರತ್ ಶೆಟ್ಟಿ ಆಗ್ರಹ

05/11/2023, 20:02

ಕಾವೂರು(reporterkarnataka.com): ರಾಜ್ಯದ ಹಣಕಾಸಿನ ವಿಚಾರವಾಗಿ ಸಾರ್ವಜನಿಕರಲ್ಲಿ ಗೊಂದಲ ಅನುಮಾನ, ಗೊಂದಲ ಮೂಡುವಂತಾಗಿದ್ದು,
ಸರಕಾರ ಗ್ಯಾರಂಟಿ ಯೋಜನೆಗಳ ಬಳಿಕ ಆರ್ಥಿಕ ಸ್ಥಿತಿಗತಿ ಹೇಗಿದೆ ಎಂಬುದಕ್ಕೆ ರಾಜ್ಯ ಸರಕಾರ ಶ್ವೇತಪತ್ರವನ್ನು ಹೊರಡಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.
ವಿವಿಧ ಇಲಾಖೆಗಳಲ್ಲಿ ದುಡಿಯುತ್ತಿರುವ ನೌಕರರಿಗೆ ವೇತನ ಪಾವತಿ ವಿಳಂಬವಾಗುತ್ತಿದೆ.ಸರಕಾರಿ ಶಾಲೆಗಳಲ್ಲಿ ಬಿಸಿ ಊಟ ಸೇರಿದಂತೆ ಪೂರಕ ಸೌಲಭ್ಯಗಳಿಗೆ ಹಣಕಾಸಿನ ಕೊರತೆ ಎದುರಾಗಿದ್ದು ಶಿಕ್ಷಕರೇ ಕೈಯಿಂದ ಭರಿಸಿ ಕೆಲಸ ಮಾಡಬೇಕಾದ ಅನಿವಾರ್ಯ ಸ್ಥಿತಿ ಉಂಟಾಗಿದೆ. ಕೆಟ್ಟು ಹೋದ ಸರಕಾರಿ ಬಸ್ಸುಗಳನ್ನು ದುರಸ್ತಿ ಮಾಡಲು ಕೂಡ ಹಿಂದುಮುಂದೆ ನೋಡುವಂತಾಗಿದೆ ಎಂದಿದ್ದಾರೆ.
ಗೃಹಲಕ್ಷ್ಮಿ ಭಾಗ್ಯದ 2000 ಹಣವನ್ನ ಖಾತೆಗೆ ಹಾಕಲು ತಾಂತ್ರಿಕ ತೊಂದರೆಯ ಕುಂಟು ನೆಪ ಹೇಳಲಾಗುತ್ತಿದೆ. ಶಾಸಕರುಗಳು ತಮ್ಮ ಕ್ಷೇತ್ರದಲ್ಲಿ ಹೊಸ ಯೋಜನೆ ಘೋಷಣೆ ಮಾಡಲೂ ಹಿಂದೇಟು ಹಾಕುವಂತಾಗಿದೆ. ಅನುದಾನವೂ ಸಿಗದಂತಾಗಿದೆ.
ಈ ಎಲ್ಲಾ ವಿಚಾರಗಳಲ್ಲಿ ಸಾಕಷ್ಟು ಗೊಂದಲ ಉಂಟು ಮಾಡುತ್ತಿದ್ದು ಸರಕಾರ ಶ್ವೇತ ಪತ್ರದ ಮೂಲಕ ಆರ್ಥಿಕ ಸ್ಥಿತಿ ಗತಿಯ ಕುರಿತು ಸಾರ್ವಜನಿಕರಿಗೆ ವಿಶ್ವಾಸವನ್ನು ಮೂಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಮರಳು ಸಮಸ್ಯೆ ಬಿಗಡಾಯಿಸಿದ್ದು, ಸರಕಾರದ ಅನುದಾನ ಪಡೆದು ಮನೆ ಕಟ್ಟಿಕೊಳ್ಳುವ ಬಡ ವರ್ಗಕ್ಕೆ ಮರಳು ಸಿಗದೆ ಮನೆ ಕಟ್ಟಲು ಆಗುತ್ತಿಲ್ಲ. ಸರಕಾರ ಮರಳು ಪೂರೈಕೆಗೆ ಬೇಕಾದ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು