7:42 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಹಸುವಿಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಹರಿದ ಗ್ಯಾಸ್ ಲಾರಿ: ಛಿದ್ರ ಛಿದ್ರಗೊಂಡ ಸವಾರನ ಮೃತದೇಹ

05/11/2023, 21:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಸ್ತೆ ಮಧ್ಯೆ ಕೂತಿದ್ದ ಹಸುವಿಗೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಉರುಳಿದ ಬೈಕ್ ಸವಾರರ ಮೇಲೆ ಗ್ಯಾಸ್ ಲಾರಿ ಹರಿದ ಪರಿಣಾಮ ದೇಹ ಛಿದ್ರಛಿದ್ರಗೊಂಡು ಸವಾರ ಮೃತಪಟ್ಟ ದಾರುಣ ಘಟನೆ ಮೂಡಿಗೆರೆ ತಾಲ್ಲೂಕಿನ ಬಿದರಹಳ್ಳಿ ಬಸ್ ಡಿಪೋ ಬಳಿ ನಡೆದಿದೆ.
ಲಾರಿ ಚಕ್ರದಡಿಗೆ ಸಿಲುಕಿ ಸಾವನ್ನಪ್ಪಿದ ಬೈಕ್ ಸವಾರರನ್ನು
ವಿಶ್ವೇಂದ್ರ (43) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಈ ಘೋರ ದುರಂತ ನಡೆದಿದೆ. ಬೈಕಿನ ಹಿಂದೆ ಕೂತಿದ್ದ ಲಕ್ಷ್ಮಿ ಎಂಬ ಮಹಿಳೆಯ ಕಾಲು ಕಟ್ ಆಗಿದೆ. ಲಕ್ಷ್ಮೀ ಅವರನ್ನು
ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕಿನಲ್ಲಿದ್ದವರು ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಲ್ಕೆರೆ ಗ್ರಾಮದವರು ಎನ್ನಲಾಗಿದೆ.ಸಾಗಿಸಲಾಗದಷ್ಟು ವಿಶ್ವೇಂದ್ರ ಮೃತದೇಹ ಛಿದ್ರಗೊಂಡಿತ್ತು.
ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು