10:14 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬೆಂಗಳೂರು ಸಮೀಪದ ಕುಣಿಗಲ್ ಬಳಿ ಫ್ಲೈ ಓವರ್ ನಿಂದ ಕೆಳಗೆ ಹಾರಿದ ಬೈಕ್: ಸವಾರ ಮಸ್ಕಿ ನಿವಾಸಿ ದಾರುಣ ಸಾವು

06/11/2023, 00:07

ಬೆಂಗಳೂರು/ರಾಯಚೂರು(reporterkarnataka.com): ಇಲ್ಲಿಗೆ ಸಮೀಪದ ಕುಣಿಗಲ್ ಫ್ಲೈ ಓವರ್ ನಿಂದ ಬೈಕೊಂದು ಕೆಳಗುರುಳಿದ ಪರಿಣಾಮ ರಾಯಚೂರು ಜಿಲ್ಲೆಯ ಮಸ್ಕಿಯ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಮಸ್ಕಿ ಪಟ್ಟಣದ ಅಂತರಗಂಗೆ ಗ್ರಾಮದ ವೀರೇಂದ್ರ ಪಾಟೀಲ್(26) ಎಂದು ಗುರುತಿಸಲಾಗಿದೆ. ಈತ
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ.
ಬೈಕಿನಲ್ಲಿ ವೇಗವಾಗಿ ಬರುತ್ತಿದ್ದ ವೀರೇಂದ್ರ ಪಾಟೀಲ್ ಅವರ ಬೈಕ್ ಕುಣಿಗಲ್ ಬೈಪಾಸ್ ಸಮೀಪ ನಿಯಂತ್ರಣ ತಪ್ಪಿ ಏಕಾಏಕಿ ಪ್ಲೇ ಓವರ್ ತಡಗೋಡಗೆ ಡಿಕ್ಕಿ ಹೊಡೆದ ಬಳಿಕ 5-6 ಬಾರಿ ಪಲ್ಟಿಯಾಗಿ 40 ಅಡಿ ಕೆಳಗೆ ಬಿದ್ದಿದೆ.ಗಂಭೀರ ಗಾಯಗೊಂಡ ವೀರೇಂದ್ರ ಅವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ನೆಲಮಂಗಲ ಟ್ರಾಫಿಕ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಇಂದು ಬೆಂಗಳೂರಿನಿಂದ ಅಂತರಗಂಗೆ ಗ್ರಾಮಕ್ಕೆ ತರಲಾಗಿದ್ದು ಕುಟುಂಬಸ್ಥರ ಕೂಗು ಮುಗಿಲುಮಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು