6:52 PM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಬೆಂಗಳೂರು ಸಮೀಪದ ಕುಣಿಗಲ್ ಬಳಿ ಫ್ಲೈ ಓವರ್ ನಿಂದ ಕೆಳಗೆ ಹಾರಿದ ಬೈಕ್: ಸವಾರ ಮಸ್ಕಿ ನಿವಾಸಿ ದಾರುಣ ಸಾವು

06/11/2023, 00:07

ಬೆಂಗಳೂರು/ರಾಯಚೂರು(reporterkarnataka.com): ಇಲ್ಲಿಗೆ ಸಮೀಪದ ಕುಣಿಗಲ್ ಫ್ಲೈ ಓವರ್ ನಿಂದ ಬೈಕೊಂದು ಕೆಳಗುರುಳಿದ ಪರಿಣಾಮ ರಾಯಚೂರು ಜಿಲ್ಲೆಯ ಮಸ್ಕಿಯ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಮಸ್ಕಿ ಪಟ್ಟಣದ ಅಂತರಗಂಗೆ ಗ್ರಾಮದ ವೀರೇಂದ್ರ ಪಾಟೀಲ್(26) ಎಂದು ಗುರುತಿಸಲಾಗಿದೆ. ಈತ
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ.
ಬೈಕಿನಲ್ಲಿ ವೇಗವಾಗಿ ಬರುತ್ತಿದ್ದ ವೀರೇಂದ್ರ ಪಾಟೀಲ್ ಅವರ ಬೈಕ್ ಕುಣಿಗಲ್ ಬೈಪಾಸ್ ಸಮೀಪ ನಿಯಂತ್ರಣ ತಪ್ಪಿ ಏಕಾಏಕಿ ಪ್ಲೇ ಓವರ್ ತಡಗೋಡಗೆ ಡಿಕ್ಕಿ ಹೊಡೆದ ಬಳಿಕ 5-6 ಬಾರಿ ಪಲ್ಟಿಯಾಗಿ 40 ಅಡಿ ಕೆಳಗೆ ಬಿದ್ದಿದೆ.ಗಂಭೀರ ಗಾಯಗೊಂಡ ವೀರೇಂದ್ರ ಅವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ನೆಲಮಂಗಲ ಟ್ರಾಫಿಕ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಇಂದು ಬೆಂಗಳೂರಿನಿಂದ ಅಂತರಗಂಗೆ ಗ್ರಾಮಕ್ಕೆ ತರಲಾಗಿದ್ದು ಕುಟುಂಬಸ್ಥರ ಕೂಗು ಮುಗಿಲುಮಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು