2:59 PM Wednesday8 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

ಇತ್ತೀಚಿನ ಸುದ್ದಿ

ರಾಜ್ಯಮಟ್ಟದ ಅಂತರ್ ಪಾಲಿಟೆಕ್ನಿಕ್ ಕ್ರೀಡಾಕೂಟ: ಶೆಟಲ್ ಬ್ಯಾಡ್ಮಿಂಟನ್‌ ನಲ್ಲಿ ರಾಜೇಶ್ ಬಿ.ಆರ್. ಪ್ರಥಮ; ರಾಷ್ಟ್ರಮಟ್ಟಕ್ಕೆ ಆಯ್ಕೆ

06/11/2023, 11:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಮೈಸೂರಿನ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ ೪೪ನೇ ರಾಜ್ಯಮಟ್ಟದ ಅಂತರ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ನಡೆದ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಮೂಡಿಗೆರೆ ತಾಲ್ಲೂಕಿನ ಭಾರತಿಬೈಲ್‌ನ ರಾಜೇಶ್ ಬಿ. ಆರ್. ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಸಿಪಿಸಿ ಪಾಲಿಟೆಕ್ನಿಕ್ ಮೈಸೂರು, ಇವರ ವತಿಯಿಂದ ನಡೆದ ೪೪ನೇ ರಾಜ್ಯಮಟ್ಟದ ಅಂತರ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಮೂಡಿಗೆರೆ ತಾಲ್ಲೂಕಿನ ಭಾರತಿಬೈಲ್‌ನ ರಾಜೇಶ್ ಬಿ. ಆರ್. ಮತ್ತು ಉಡುಪಿಯ ದರ್ಶನ್ ಸಿ. ಅಂಬಲಪಾಡಿ ಭಾಗವಹಿಸಿದ್ದು ಪ್ರಥಮ ಸ್ಥಾನ ಪಡೆಯುವ ಮೂಲಕ ರಾಷ್ಟ್ರ
ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳೊಂದಿಗೆ ಉಡುಪಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಉಮಾ ಬಿ. ಮತ್ತು ಕ್ರೀಡಾ ಯೋಜನಾಧಿಕಾರಿಳಾದ ಮಧು ಎಂಜಿ ಇದ್ದರು. ಮೂಡಿಗೆರೆ ತಾಲ್ಲೂಕಿನ ಭಾರತಿಬೈಲ್‌ನ ರಾಜೇಶ್ ಬಿ. ಆರ್., ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮೊ ವ್ಯಾಸಂಗ ಮಾಡುತ್ತಿದ್ದಾರೆ. ರಾಜೇಶ್ ಬಿ.ಆರ್. ಭಾರತಿಬೈಲ್‌ನ ರಾಮಚಂದ್ರ ಮತ್ತು ಸರೋಜ ದಂಪತಿ ಪುತ್ರ.
ಇದೇ ಕ್ರೀಡಾಕೂಟದಲ್ಲಿ ಉಡುಪಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಾದ ಸಾಕ್ಷಿತ್ ದೇವಾಡಿಗ ಕಾಪು , ಸುಚಿತ್ ಕುಂದಾಪುರ, ಕಾರ್ತಿಕ್ ಶೆಟ್ಟಿಗಾರ್, ಸಂದೀಪ್ ಎಚ್ ಎಂ, ಶ್ರೀ ಜಿ ಆಚಾರ್ಯ ಕುಂದಾಪುರ, ಸನಾತ್ ಆಚಾರ್ಯ ಕಾಪು, ವಿನಯ್ ಕುಮಾರ್, ಆದಿತ್ಯ ಉಡುಪಿ ವಾಲಿಬಾಲ್ ಪಂದ್ಯದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು