3:38 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಹೈ ಮಾಸ್ಕ್ ದೀಪ ಖರೀದಿಯಲ್ಲಿ ತಾಪಂ ಇಒ ಭಾರಿ ಅವ್ಯವಹಾರ: 3 ಪಟ್ಟು ಜಾಸ್ತಿ ತೆತ್ತು ಖರೀದಿ ಆರೋಪ

01/08/2021, 08:20

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಹೈ ಮಾಸ್ಕ್ ಖರೀದಿಯಲ್ಲಿ ಅವ್ಯವಹಾರ ಮಾಡಿದ್ದು ಸಂಬಂಧಪಟ್ಟ ದಾಖಲೆ ನೀಡಲು ಮೀನಮೇಷ ಮಾಡುತ್ತಿದ್ದಾರೆ. ಕೂಡಲೇ ತನಿಖೆ ಮಾಡಬೇಕೆಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ

ಎನ್. ಜೆ  ರಾಜೇಶ್ ಆರೋಪಿಸಿದ್ದಾರೆ.

ನಾಗಮಂಗಲದ ಕಾರ್ಯನಿರತ ಸಂಘದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,

ನಾಗಮಂಗಲ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು  ಹೈ ಮಾಸ್ಕ್ ಖರೀದಿಯಲ್ಲಿ ಮೂರು ಪಟ್ಟು ಬೆಲೆ ನಮೂದಿಸಿ ಖರೀದಿ ಮಾಡಿರುವುದು ಕಂಡುಬಂದಿದೆ. ಈ ಬಗ್ಗೆ ಮಾಹಿತಿ ಕೇಳಿದರೆ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಅನುಮಾನಾಸ್ಪದವಾಗಿದೆ ಎಂದು ಹೇಳಿದರು.

2020 -21 ನೇ ಸಾಲಿನ ಹೆಚ್ಚುವರಿ ಸಂಯುಕ್ತ ಅನುದಾನ 32.25 ಲಕ್ಷದ ಯೋಜನೆಯಲ್ಲಿ ಖರೀದಿ ಇತರೆ ಯೋಜನೆಗಳಲ್ಲಿಯೂ ಮಾಡಿರುವ ಹೈ ಮಾಸ್ಕ್ ದೀಪಗಳು ಅವ್ಯವಹಾರವಾಗಿದೆ ಹಾಗೂ ದೀಪ ಖರೀದಿ ಮಾಡಿ ಸಂಬಂಧಪಟ್ಟ ಪಂಚಾಯಿತಿಗಳಿಗೆ ಹಸ್ತಾಂತರ  ಮಾಡಬೇಕಾಗಿದ್ದು ಆದರೆ ಯಾವುದೇ ದಾಖಲೆಗಳು ನೀಡಿಲ್ಲವೆಂದು ತಿಳಿದು ಬಂದಿದೆ ಕೂಡಲೇ ಯೋಜನೆಯ ಬಗ್ಗೆ ಪೂರ್ಣ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ತುಪ್ಪದ ಮಡ ಗ್ರಾಮ ಪಂಚಾಯಿತಿ ಸದಸ್ಯರಾದ ಹರೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು