8:57 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಜಲ ಕಂಟಕ: ರಾಜ್ಯದ ಬರಪೀಡಿತ ತಾಲೂಕುಗಳ ಪಟ್ಟಿಗೆ ಸಿಂಧನೂರು ಸೇರಿದಂತೆ ಮತ್ತೆ 7 ತಾಲೂಕುಗಳ ಸೇರ್ಪಡೆ

06/11/2023, 19:48

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಜ್ಯದ ಬರಪೀಡಿತ ತಾಲೂಕುಗಳ ಪಟ್ಟಿಗೆ ಮತ್ತೆ 7 ತಾಲೂಕುಗಳನ್ನು ಸೇರ್ಪಡೆ ಮಾಡಿ ಕಂದಾಯ‌ ಇಲಾಖೆ ಆದೇಶ ಹೊರಡಿಸಿದೆ.
ಬೀದರ್ ಜಿಲ್ಲೆಯ ಔರಾದ್, ಬೀದರ್, ಚಿಟಗುಪ್ಪಾ,ಹುಮ್ನಾಬಾದ್, ಕಮಲನಗರ, ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು, ವಿಜಯಪುರ ಜಿಲ್ಲೆಯ ತಿಕೋಟಾ ಬರಪೀಡಿತ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಂಡ ತಾಲೂಕುಗಳು.
ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ-2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿರುವ ಮಾನದಂಡಗಳ ಪ್ರಕಾರ ಮತ್ತು ಜಿಲ್ಲಾಧಿಕಾರಿಗಳಿಂದ ಬೆಳಹಾನಿ ಸಮೀಕ್ಷೆ ವರದಿಯ ಅನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೊಸದಾಗಿ 07 ತಾಲ್ಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ 6 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಘೋಷಿಸಿ ಆದೇಶಿಸಲಾಗಿದೆ.
ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆಯ ಕೊರತೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದ್ದು ಬರಗಾಲ ಛಾಯೆ ಮೂಡಿದೆ. ಹೀಗಾಗಿ ಸರ್ಕಾರವು ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಈಗಾಗಲೇ ಘೋಷಣೆ ಮಾಡಿತ್ತು.
ಬರ ಪೀಡಿತ ತಾಲೂಕುಗಳ ನಿರ್ವಹಣೆಗಾಗಿ ಸರ್ಕಾರ ರಾಜ್ಯದ ಎಲ್ಲಾ ತಾಲೂಕುಗಳಿಗೆ ಅನುದಾನವನ್ನು ಬಿಡುಗಡೆಗೊಳಿಸಿ ಆದೇಶ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು