4:57 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ಮರಳು ಸಮಸ್ಯೆ ಬಗೆಹರಿಸಲು ಗೃಹ ಸಚಿವರಿಗೆ ಇನಾಯತ್ ಅಲಿ, ಮಿಥುನ್ ರೈ ಮನವಿ: ಪರಿಹಾರದ ಭರವಸೆ

06/11/2023, 20:23

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವು ತಿಂಗಳಿಂದ ಮರಳು ಸಮಸ್ಯೆ ಉಂಟಾಗುತ್ತಿದ್ದು, ಸಮಸ್ಯೆ ಪರಿಹರಿಸುವಂತೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಕಾಂಗ್ರೆಸ್ ನಾಯಕರಾದ ಇನಾಯತ್ ಆಲಿ ಹಾಗೂ ಮಿಥುನ್ ರೈ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಹಲವು ತಿಂಗಳಿಂದ ಮರಳು ಸಮಸ್ಯೆ ಉಂಟಾಗುತ್ತಿದ್ದು, ಲಭ್ಯವಿರುವ ಮರಳಿಗೆ ದುಬಾರಿ ಬೆಲೆ ನೀಡಬೇಕಾಗಿದೆ. ಇದರಿಂದ ಜಿಲ್ಲೆಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಮರಳು ಖರೀದಿ ಅಸಾಧ್ಯವಾಗಿದೆ. ಈ ಕಾರಣದಿಂದ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗಳು ಹಲವೆಡೆ ಸ್ಥಗಿತಗೊಂಡಿದೆ.
ಗೃಹ ಸಚಿವ ಡಾ. ಜಿ.‌ ಪರಮೇಶ್ವರ್ ಅವರು ಮಂಗಳೂರಿಗೆ ಆಗಮಿಸಿದ ಸಂದರ್ಭ ಈ ವಿಚಾರವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹಾಗೂ ಮಿಥುನ್ ರೈ ಗೃಹ ಸಚಿವರೊಂದಿಗೆ ಚರ್ಚೆ ನಡೆಸಿದರು. ಮರಳುಗಾರಿಕೆಗೆ ಅನುಮತಿಯ ವಿಚಾರದ ಬಗ್ಗೆ ಗೃಹ ಸಚಿವರ ಗಮನಕ್ಕೆ ತಂದರು.
ಈ ಬಗ್ಗೆ ತಕ್ಷಣವೇ ಸ್ಪಂದಿಸಿದ ಗೃಹ ಸಚಿವರು ಸ್ಥಳದಲ್ಲಿದ್ದ ಜಿಲ್ಲಾಧಿಕಾರಿಗಳಿಗೆ ಹಾಗೂ ಪೊಲೀಸ್ ಆಯುಕ್ತರಿಗೆ ಸೂಕ್ತ ಕ್ರಮಕೈಗೊಂಡು ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು