5:26 AM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮಾಜಿ ಶಾಸಕ ಬಾವಾರಿಂದ 7 ಕಡೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಲೋಕಾರ್ಪಣೆ

17/05/2021, 18:13

ಸುರತ್ಕಲ್(reporterkarnataka news): ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮೊಯಿದೀನ್ ಬಾವಾ ಅವರು ಏಕಕಾಲದಲ್ಲಿ ತಮ್ಮ ಕ್ಷೇತ್ರಾದ್ಯಂತ ಏಳು ಕಡೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಅನ್ನು ಸೋಮವಾರ ಲೋಕಾರ್ಪಣೆಗೊಳಿಸಿದರು. 

ಎಜೆ ಆಸ್ಪತ್ರೆಯ ಕಾರ್ಡಿಯೋಲಾಜಿಸ್ಟ್ ಡಾ. ಬಿ.ವಿ. ಮಂಜುನಾಥ್ ಅವರು ಉದ್ಘಾಟನೆ ನೆರವೇರಿಸಿದರು. ಬಳಿಕ ಮಾತಾಡಿದ ಅವರು, “ಕೊರೋನಾ ಎರಡನೇ ಅಲೆ ದೇಶದಲ್ಲಿ ಪ್ರಬಲ ಪರಿಣಾಮವನ್ನು ಬೀರುತ್ತಿದೆ. ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಜನರು ಈ ಸಂದರ್ಭದಲ್ಲಿ ಜಾಗರೂಕರಾಗಿರಬೇಕು. ಜನರಿಗೆ ತುರ್ತು ಸಂದರ್ಭದಲ್ಲಿ ಅವಶ್ಯಕತೆ ಇರುವ ಆಕ್ಸಿಜನ್, ಬೆಡ್ ಸಹಿತ ಅಗತ್ಯ ವೈದ್ಯಕೀಯ ಸೌಲಭ್ಯ ಒದಗಿಸಲು ಮೊಯಿದೀನ್ ಬಾವಾ ಅವರು ಕೈಗೊಂಡ ಕ್ರಮ ಶ್ಲಾಘನೀಯ. ಮನೆಗಳಲ್ಲಿ ಒಬ್ಬರಿಗೆ ಕೊರೋನಾ ಬಂದರೆ ಅದು ಇತರರಿಗೂ ಹರಡುವ ಸಾಧ್ಯತೆ ಇದ್ದು ಅವರನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡುವ ಕೆಲಸವನ್ನು ಇಂತಹ ಕೋವಿಡ್ ಕೇರ್ ಸೆಂಟರ್ ಮಾಡುತ್ತಿದೆ” ಎಂದು ಮಂಜುನಾಥ್ ಹೇಳಿದರು.

ಬಳಿಕ ಮಾತಾಡಿದ ಮೊಯಿದೀನ್ ಬಾವಾ ಅವರು, “ಕೋವಿಡ್ ಕೇರ್ ಸೆಂಟರ್ ಜನರ ಪ್ರಾಣ ಉಳಿಸುವ ನಿಟ್ಟಿನಲ್ಲಿ ನನ್ನ ಸಣ್ಣ ಪ್ರಯತ್ನ. ಇದರಲ್ಲಿ ಯಾವುದೇ ಕಾರಣಕ್ಕೂ ರಾಜಕೀಯ ಬೆರೆಸಬೇಡಿ. ಇಲ್ಲಿ ಯಾವುದೇ ಜಾತಿ ಧರ್ಮದ ವಿಚಾರಕ್ಕೆ ಅವಕಾಶವಿಲ್ಲ. ನನ್ನ ಕ್ಷೇತ್ರದ ಏಳು ಕಡೆಗಳಲ್ಲಿ ಸ್ಥಳೀಯ ಮಸೀದಿ, ಕಮ್ಯುನಿಟಿ ಹಾಲ್, ಸಂಘ ಸಂಸ್ಥೆಗಳು ನೀಡಿದ ಸ್ಥಳದಾನದಲ್ಲಿ ನನ್ನ ವೈಯಕ್ತಿಕ ಖರ್ಚಿನಿಂದ ಬೆಡ್, ಆಕ್ಸಿಜನ್, ವೈದ್ಯರು, ನರ್ಸ್, ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಎಲ್ಲವನ್ನೂ ಒದಗಿಸಿದ್ದೇನೆ. ಇಲ್ಲಿ ಬರುವ ಜನರು ಶೀಘ್ರ ಗುಣಮುಖರಾಗಿ ತಂತಮ್ಮ ಮನೆಗಳಿಗೆ ತೆರಳುವಂತಾದರೆ ನನ್ನ ಶ್ರಮ ಸಾರ್ಥಕ. ಸಮಾಜಸೇವೆ ಮಾಡಲು ಅಧಿಕಾರ ಬೇಕೆಂದಿಲ್ಲ. ಹಿಂದಿನಿಂದಲೂ ಜನರ ಸೇವೆಗಾಗಿ ನಾನಿದ್ದೇನೆ. ಕೋವಿಡ್ ಕೇರ್ ಸೆಂಟರ್ ನಲ್ಲಿ ನುರಿತ ವೈದ್ಯಕೀಯ ಸೌಲಭ್ಯವಿದ್ದು ತುರ್ತು ಸಂದರ್ಭದಲ್ಲಿ ಸಹಾಯಕ್ಕೆ ಬರಲು ವಾರಿಯರ್ಸ್ ನೇಮಿಸಿದ್ದೇನೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಆಶಯ ವ್ಯಕ್ತಪಡಿಸಿದರು. ಕಾಟಿಪಳ್ಳ ಬದ್ರಿಯಾ ಜುಮಾ ಮಸೀದಿ, ಬೈಕಂಪಾಡಿ ಅಡ್ಕ ಕಮ್ಯುನಿಟಿ ಹಾಲ್, ಬರಾಕ ಇಂಟರ್ ನ್ಯಾಷನಲ್ ಸ್ಕೂಲ್ ಅಡ್ಯಾರ್, ಜೋಕಿಮ್ಸ್ ಸ್ಕೂಲ್ ನೀರ್ ಮಾರ್ಗ, ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಉಳಾಯಿಬೆಟ್ಟು, ಬಾಮಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗುರುಪುರ, ಬಾಜಿ ಮಂಜಿಲ್ ಜೆಎಂ ರೋಡ್ ಗಂಜೀಮಠ ಇತ್ಯಾದಿ ಕಡೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಗೊಂಡಿದೆ.

ಕಾಟಿಪಳ್ಳ ಜಮಾತ್ ಅಧ್ಯಕ್ಷ ಅಹಮದ್ ಬಾವ, ಸೈಫುಲ್ಲಾ, ಬಶೀರ್ ಅಹಮದ್, ಅಯ್ಯೂಬ್, ಕಾಟಿಪಳ್ಳ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಹುಸೈನ್ ಕಾಟಿಪಳ್ಳ, ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಹ್ಯಾರೀಸ್ ಬೈಕಂಪಾಡಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು