11:50 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣು: ಇನ್ನೋರ್ವ ಪರಾರಿ

07/11/2023, 11:46

ಪುತ್ತೂರು(reporterkarnataka.com): ಇಲ್ಲಿನ ನೆಹರೂ ನಗರದಲ್ಲಿ ನಡೆದ ಕಲ್ಲೇಗ ಟೈಗರ್ಸ್ ಹುಲಿ ವೇಷ ತಂಡದ ಸಾರಥಿ ಅಕ್ಷಯ್ ಕಲ್ಲೇಗ(24) ಅಮಾನುಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ.
ಕಲ್ಲೇಗ ಟೈಗರ್ಸ್ ಎಂಬ ಹುಲಿ ಮೇಷ ತಂಡವನ್ನು ಮುನ್ನಡೆಸುತ್ತಿದ್ದ ಅಕ್ಷಯ್ ಕಲ್ಲೇಗ ಅವರನ್ನು ತಲವಾರಿನಿಂದ ಕಡಿದು ಹತ್ಯೆ ಮಾಡಲಾಗಿತ್ತು. ನೆಹರೂ ನಗರದಿಂದ ವಿವೇಕಾನಂದ ಕಾಲೇಜಿಗೆ ಹೋಗುವ ರಸ್ತೆಯಲ್ಲಿ ಎಟಿಎಂ ಎದುರು ಅಕ್ಷಯ್ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿದ್ದರು. ಅಕ್ಷಯ್ ಅವರನ್ನು ಅಟ್ಟಾಡಿಸಿಕೊಂಡು ಹೋಗಿ ತಲವಾರಿನಿಂದ ಕಡಿದು ಕೊಲೆ ಮಾಡಲಾಗಿತ್ತು. ಸೋಮವಾರ ತಡರಾತ್ರಿ ಈ ಕೃತ್ಯ ನಡೆಸಲಾಗಿತ್ತು.
ಅಕ್ಷಯ್ ತಂಡ ಹುಲಿ ಮೇಷದಲ್ಲಿ ಬಹಳಷ್ಟು ಜನಪ್ರಿಯತೆ ಗಳಿಸಿತ್ತು. ಪಿಲಿರಂಗ್ ಮತ್ತು ಪಿಲಿಗೊಬ್ಬು ಈ ಎರಡೂ ಸ್ಪರ್ಧೆಯಲ್ಲಿ ಅಕ್ಷಯ್ ತಂಡ ಪ್ರಶಸ್ತಿ ಪಡೆದಿತ್ತು. ಇದೀಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಮನೀಶ್ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ. ಇನ್ನೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು