2:23 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ರೋಟರಿ ಶ್ರೀನಿವಾಸಪುರ ಸೆಂಟ್ರಲ್‌ ಪದಗ್ರಹಣ; ಸೇವೆಗೆ ಜಾತಿ, ಮತ, ಭಾಷೆಯ ಎಲ್ಲೆ ಇಲ್ಲ: ಡಾ. ವೈ.ವಿ. ವೆಂಕಟಾಚಲ

01/08/2021, 08:22

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಮನುಷ್ಯ ಸೇವೆಯಲ್ಲಿ ಸಾರ್ಥಕತೆ ಕಂಡುಕೊಳ್ಳಬೇಕು. ಸಮ ಸಮಾಜ ಕಲ್ಪನೆ ಸಾಕರಗೊಳ್ಳಲು ಸಮುದಾಯದಲ್ಲಿ ಮಾನವೀಯ ಪ್ರಜ್ಞೆ ಗರಿಗೆದರಬೇಕು ಎಂದು ರೋಟರಿ ಸೆಂಟ್ರಲ್ ಶ್ರೀನಿವಾಸಪುರ ಸಂಸ್ಥೆಯ ನೂತನ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹೇಳಿದರು.

ಪಟ್ಟಣದ ವೆಂಟೇಶಗೌಡ ಕಲ್ಯಾಣ ಮಂಟಪದ ಆವರಣದಲ್ಲಿ ಏರ್ಪಡಿಸಿದ್ದ ಪದಗ್ರಹಣ ಸಮಾರಂಭದಲ್ಲಿ ರೋಟರಿ ಸೆಂಟ್ರಲ್ ಶ್ರೀನಿವಾಸಪುರ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.

ಸೇವೆಗೆ ಜಾತಿ, ಮತ, ಭಾಷೆಯ ಎಲ್ಲೆ ಇರುವುದಿಲ್ಲ. ಅಗತ್ಯ ಇರುವ ವ್ಯಕ್ತಿಗಳಿಗೆ ಸಹಾಯ ಹಸ್ತ ನಿಡುವುದು ಮಾನವ ಧರ್ಮ ಎಂದು ಹೇಳಿದರು.

ಶಾಂತಿ ಬೆಳೆಸುವುದು ಹಾಗೂ ಅಶಾಂತಿ ಹೋಗಲಾಡಿಸುವುದು, ಸಮ ಸಮಾಜ ನಿರ್ಮಾಣಕ್ಕೆ ಪ್ರತ್ನಿಸುವುದು, ಶ್ರೇಷ್ಠ ಜೀವನದೆಡೆಗೆ ಜನರನ್ನು ಕೊಂಡೊಯ್ಯುವುದು ಸೇವಾ ಸಂಸ್ಥೆಯ ಉದ್ದೇಶವಾಗಿದೆ. ಈ ಉದ್ದೇಶ ನೆರವೇರಲು ಮಾನವೀಯ ನೆಲೆಯಲ್ಲಿ, ಸಮರ್ಪಣಾ ಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಅಭಿಪ್ರಾಯಪಟ್ಟರು

ಜನರು ಹಾಗೂ ಸಾಕು ಪ್ರಾಣಿಗಳ ಆರೋಗ್ಯ ರಕ್ಷಣೆಗೆ ಪೂರಕವಾಗಿ ಉಚಿತ ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗುವುದು. ಅಂಗ ದಾನದ ಮಹತ್ವ ಕುರಿತು ಜನರಲ್ಲಿ ಅರಿವು ಮೂಡಿಸಲಾಗುವುದು. ಕೋವಿಡ್ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮುದಾಯದ ಗಮನ ಸೆಳೆಯಲಾಗುವುದು. ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರ ಸಹಕಾರದಿಂದ ಸಮಾಜ ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ರೋಟರಿ ಶ್ರೀನಿವಾಸಪುರ ಸೆಂಟ್ರಲ್‌ನ ನಿಕಟಪೂರ್ವ ಅಧ್ಯಕ್ಷ ಶಿವಮೂರ್ತಿ ಮಾತನಾಡಿ, ತಮ್ಮ ಅಧಿಕಾರಾವಧಿಯಲ್ಲಿ ಕೋವಿಡ್ ಸಂಕಷ್ಟದ ನಡುವೆಯೂ ೧೪೮ ಯೋಜನೆಗಳನ್ನು ರೂಪಿಸಿ ಜಾರಿಗೆ ತರಲಾಯಿತು. ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲಾಯಿತು. ಈಗಾಗಲೇ ಸಮಾಜ ಸೇವೆಯಲ್ಲಿ ತಮ್ಮದೇ ಆಧ ಛಾಪು ಮೂಡಿಸಿರುವ ಡಾ. ವೈ.ವಿ.ವೆಂಕಟಾಚಲ ಅವರು ಸಮಾಜ ಮುಖಿ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಸಂಸ್ಥೆಯ ಜಿಲ್ಲಾ ಗರ‍್ನರ್ ಉದಯ್ ಕುಮಾರ್ ಭಾಸ್ಕರ್, ಸುಧಾರಕರ್, ಬಿ.ಶ್ರೀನಿವಾಸ್, ಸೀತರೆಡ್ಡಿ, ಕೃಷ್ಣಮೂರ್ತಿ, ಶ್ರೀನಿವಾಸರೆಡ್ಡಿ, ಎನ್.ಬಿ.ಗೋಪಾಲಗೌಡ ಸೇವೆಯ ಮಹತ್ವ ಕುರಿತು ಮಾತನಾಡಿದರು. ಕಾರ್ಯದರ್ಶಿ ಎಚ್.ಎನ್.ನಾರಾಯಣಸ್ವಾಮಿ, ಮುಖಂಡರಾದ ಎಲ್.ಗೊಪಾಲಕೃಷ್ಣ, ಕೆ.ವಿ.ಶಂಕರಪ್ಪ, ಎನ್.ರಾಜೇಂದ್ರ ಪ್ರಸಾದ್, ಗೋಪಾಲರೆಡ್ಡಿ, ಟಿ.ಎಸ್.ರಾಮಚಂದ್ರೇಗೌಡ, ರವೀಂದ್ರಯ್ಯ ಕುಲಕರ್ಣಿ, ಎಂ.ಎನ್.ರಾಮಚಂದ್ರೇಗೌಡ, ಎಸ್.ಎನ್.ಮಂಜುನಾಥರೆಡ್ಡಿ, ವೀರವೆಂಕಟಪ್ಪ, ಲಕ್ಷ್ಮಣಗೌಡ, ಕೃಷ್ಣಾರೆಡ್ಡಿ, ನಾಗರಾಜ್, ಟಿ.ಎಸ್.ಮಾಯಾ, ಡಾ. ಶುಭಾ, ಬಾಲಚಂದ್ರ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು