12:23 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಜಿಲ್ಲಾಧಿಕಾರಿಯರೇ, ತೈಲ ಬೆಲೆ ಏರಿದ್ದು ಬಸ್ ಮಾಲಿಕರಿಗೆ ಮಾತ್ರವಲ್ಲ: ಪ್ರಯಾಣ ದರ ಹೆಚ್ಚಳ ವಿರುದ್ಧ ಪ್ರತಿಭಟನಾ ಪ್ರದರ್ಶನ

01/08/2021, 08:36

ಮಂಗಳೂರು(reporterkarnataka news): ದ.ಕ.ಜಿಲ್ಲೆಯ ಖಾಸಗೀ ಬಸ್ ಪ್ರಯಾಣ ದರಯೇರಿಕೆಯ ವಿರುದ್ಧ ಹಾಗೂ ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ಖಂಡಿಸಿ ನಗರದಲ್ಲಿಂದು ಸಿಪಿಐಎಂ, ಡಿವೈಎಫ್ ಐ ಹಾಗೂ ಜೆಎಂ ಎಸ್ ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಿತು.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು, ಜಿಲ್ಲಾಡಳಿತ ಹಾಗೂ ಬಸ್ ಮಾಲಿಕರ ವಿರುದ್ಧ ಘೋಷಣೆ ಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಸಿಪಿಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ , ಕೊರೊನಾ ಸಂಕಷ್ಟದ ಕಾಲದಲ್ಲಿ ಜನತೆಯ ಬದುಕೇ ದುಸ್ತರವಾಗಿದ್ದು, ಇದೇ ಸಂದರ್ಭದಲ್ಲಿ ಬಸ್ ಪ್ರಯಾಣ ದರವನ್ನೂ ಏರಿಸುವ ಮೂಲಕ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕಳೆದ ಬಾರಿ ಮಾಸ್ಕ್ ಹಾಕದ ಅಮಾಯಕ ಯುವಕನ ಮೇಲೆ ದಾಳಿ ನಡೆಸಿ, ತಾನು ಜನರ ಪರ ಎಂಬಂತೆ ಕಪಟ ನಾಟಕವಾಡಿದ ಜಿಲ್ಲಾಧಿಕಾರಿಗಳಿಗೆ, ಬಸ್ ಪ್ರಯಾಣ ದರಯೇರಿಕೆಯಿಂದ ಲಕ್ಷಾಂತರ ಜನರಿಗೆ ತೊಂದರೆ ಯಾಗುತ್ತೆ ಎಂಬ ಕನಿಷ್ಟ ಜ್ಞಾನ ಇಲ್ಲವೇ ಎಂದು ಪ್ರಶ್ನಿಸಿದರು.

ಬಸ್ ಮಾಲಿಕರು 20% ಹೆಚ್ಚಳಕ್ಕೆ ಆಗ್ರಹಿಸಿದರೆ, ಜಿಲ್ಲಾಧಿಕಾರಿಗಳು 50%ಕ್ಕೂ ಅಧಿಕ ದರ ಏರಿಕೆಗೆ ಅನುಮತಿ ನೀಡಿರುವ ಮೂಲಕ ಬಸ್ ಮಾಲಿಕರ ಲಾಬಿಗೆ ದ.ಕ.ಜಿಲ್ಲಾಡಳಿತವು ಸಂಪೂರ್ಣ ಬಲಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಗತಿಪರ ಚಿಂತಕರಾದ ಡಾ.ಕೃಷ್ಣಪ್ಪ ಕೊಂಚಾಡಿ ಮಾತನಾಡಿ, ಬಸ್ ಪ್ರಯಾಣ ದರಯೇರಿಕೆಗೆ ಸಂಬಂಧಿಸಿ ಸಾರಿಗೆ ಪ್ರಾಧಿಕಾರದ ಸಭೆ ಕರೆಯಬೇಕಾದ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಅಹವಾಲನ್ನು ಕೇಳದೆ ಕೇವಲ ಬಸ್ ಮಾಲಕರ ಪರವಾಗಿ ವರ್ತಿಸಿರುವುದು ಭಾರೀ ಸಂಶಯಕ್ಕೆಡೆಮಾಡಿದೆ ಎಂದು ಜಿಲ್ಲಾಡಳಿತದ ಸರ್ವಾಧಿಕಾರಿ ನಡೆಯನ್ನು ಟೀಕಿಸಿದರು.

ಡಿವೈಎಫ್ ಐ ದ.ಕ.ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, ಪ್ರತಿಯೊಂದು ಸಂದರ್ಭದಲ್ಲೂ ಸರಕಾರದ ಪರವಾಗಿ ತುತ್ತೂರಿ ಬಾರಿಸುವ ಬಸ್ ಮಾಲಿಕರು ಯಾವತ್ತಾದರೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯೇರಿಕೆಯ ವಿರುದ್ದ ದ್ವನಿ ಎತ್ತಿದ್ದಾರೆಯೇ…? ನೆರೆಯ ಕೇರಳ ರಾಜ್ಯ ಸರಕಾರವು ಖಾಸಗೀ ಬಸ್ ಮಾಲಕರಿಗೆ 4 ತಿಂಗಳು ತೆರಿಗೆ ವಿನಾಯಿತಿ ನೀಡಿದಂತೆ, ಕರ್ನಾಟಕ ರಾಜ್ಯ ಸರಕಾರವೂ ತಮಗೆ ನೀಡಬೇಕೆಂದು ಯಾಕೆ ಒತ್ತಾಯಿಸುತ್ತಿಲ್ಲ.ಅದನ್ನು ಬಿಟ್ಟು ಜನಸಾಮಾನ್ಯರ ಬದುಕಿಗೆ ಕೊಡಲಿಪೆಟ್ಟು ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ನಾಯಕರಾದ ಜೆ.ಬಾಲಕೃಷ್ಣ ಶೆಟ್ಟಿ, ದಯಾನಂದ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಬಾಬು ದೇವಾಡಿಗ, ಜೆಎಂ.ಎಸ್ ಜಿಲ್ಲಾ ನಾಯಕರಾದ ಜಯಂತಿ ಶೆಟ್ಟಿ, ಭಾರತಿ ಬೋಳಾರ, ಡಿವೈಎಫ್ ಐ ಜಿಲ್ಲಾ ನಾಯಕರಾದ ನವೀನ್ ಕೊಂಚಾಡಿ,ಮನೋಜ್ ವಾಮಂಜೂರು,ದಲಿತ ಹಕ್ಕುಗಳ ಸಮಿತಿಯ ನಾಯಕರಾದ ತಿಮ್ಮಯ್ಯ ಕೊಂಚಾಡಿ,ಕ್ರಷ್ಣ ತಣ್ಣೀರುಬಾವಿ, ಸಾಮಾಜಿಕ ಕಾರ್ಯಕರ್ತರಾದ ಜೆರಾಲ್ಡ್ ಟವರ್,ಅಶುಂತ ಡಿಸೋಜ, ಸಿಐಟಿಯು ಮುಖಂಡರಾದ ಸಂತೋಷ್ ಆರ್.ಎಸ್,ನಾಗೇಶ್ ಕೋಟ್ಯಾನ್ ಭಾಗವಹಿಸಿದ್ದರು.

ಪ್ರತಿಭಟನೆಯ ನೇತ್ರತ್ವವನ್ನು ಸಿಪಿಎಂ ಮಂಗಳೂರು ನಗರ ಮುಖಂಡರಾದ ದಿನೇಶ್ ಶೆಟ್ಟಿ, ಪ್ರದೀಪ್, ಮನೋಜ್, ಅಶೋಕ್ ಸಾಲ್ಯಾನ್, ಡಿವೈಎಫ್ ಐ ನಾಯಕರಾದ  ನೌಶಾದ್ ಬೆಂಗರೆ, ಜಗದೀಶ್ ಬಜಾಲ್, ಜೆಎಂ ಎಸ್ ಮುಖಂಡರಾದ ಜಯಲಕ್ಷ್ಮಿ,ಜೆಸಿಂತ ಡಿಸೋಜ ಮುಂತಾದವರು ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು