4:44 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ವಿದ್ಯುತ್ ಖಾಸಗೀಕರಣ: ತೊಕ್ಕೊಟ್ಟು, ಕೈಕಂಬ ಹಾಗೂ ಮಂಗಳೂರಿನ ಮೆಸ್ಕಾಂ ಪ್ರಧಾನ ಕಚೇರಿ ಎದುರು ಪ್ರತಿಭಟನೆ

08/11/2023, 18:28

ಮಂಗಳೂರು(reporterkarnataka.com): ಆಧುನಿಕ ನಾಗರಿಕ ಸಮಾಜದ ಕೇಂದ್ರ ನರಮಂಡಲದಂತೆ ಕಾರ್ಯನಿರ್ವಹಿಸುವ ಹಾಗೂ ಎಲ್ಲಾ ಕೈಗಾರಿಕೆಗಳ ತಾಯಿಯಂತಿರುವ ಅತ್ಯಂತ ಪ್ರಮುಖ ಸೇವೆಯಾದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ನರೇಂದ್ರ ಮೋದಿ ಸರಕಾರದ ಕಾರ್ಪೊರೇಟ್ ಪರ ನೀತಿಯನ್ನು ವಿರೋಧಿಸಿ ದೇಶಾದ್ಯಂತ ನಡೆದ ಹೋರಾಟದ ಭಾಗವಾಗಿ ಮಂಗಳೂರಿನ ಬಿಜೈಯಲ್ಲಿರುವ ಮೆಸ್ಕಾಂ ಪ್ರಧಾನ ಕಚೇರಿ, ತೊಕ್ಕೋಟು ಹಾಗೂ ಗುರುಪುರ ಕೈಕಂಬ ಮೆಸ್ಕಾಂ ಕಚೇರಿಯೆದುರು ರೈತ ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದರು.
ಮಂಗಳೂರಿನಲ್ಲಿ ಜರುಗಿದ ಪ್ರತಿಭಟನೆಯನ್ನುದ್ದೇಶಿಸಿ ಸುನಿಲ್ ಕುಮಾರ್ ಬಜಾಲ್, ಎಚ್ ವಿ.ರಾವ್, ಯಾದವ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಸೀತಾರಾಮ ಬೇರಿಂಜ, ಜಯಂತಿ ಶೆಟ್ಟಿ, ಸಂತೋಷ್ ಬಜಾಲ್, ಎಂ.ದೇವದಾಸ್ ಅವರು ಮಾತನಾಡಿದರೆ, ಗುರುಪುರ ಕೈಕಂಬದಲ್ಲಿ ಜರುಗಿದ ಪ್ರತಿಭಟನೆಯನ್ನುದ್ದೇಶಿಸಿ ಮುನೀರ್ ಕಾಟಿಪಳ್ಳ, ಸದಾಶಿವದಾಸ್, ನೋಣಯ್ಯ ಗೌಡ, ಮನೋಜ್ ವಾಮಂಜೂರು‌ ಅವರು ಮಾತನಾಡಿದರು. ತೊಕ್ಕೊಟುನಲ್ಲಿ ಜರುಗಿದ ಪ್ರತಿಭಟನೆಯನ್ನುದ್ದೇಶಿಸಿ ಜೆ.ಬಾಲಕೃಷ್ಣ ಶೆಟ್ಟಿ, ಸುಕುಮಾರ್ ತೊಕ್ಕೋಟು, ಜಯಂತ ನಾಯಕ್, ಕ್ರಷ್ಣಪ್ಪ ಸಾಲ್ಯಾನ್, ರೋಹಿದಾಸ್ ಭಟ್ನಗರರವರು ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು